ಶಿವಮೊಗ್ಗ; ಬಾವಿಯೊಳಗೆ ಶ್ರೀಗಂಧ ಅಡಗಿಸಿಟ್ಟಿದ್ದರು. ಚಾಲಾಕಿಗಳು!

Published : Dec 02, 2020, 09:40 PM ISTUpdated : Dec 02, 2020, 09:44 PM IST
ಶಿವಮೊಗ್ಗ; ಬಾವಿಯೊಳಗೆ ಶ್ರೀಗಂಧ ಅಡಗಿಸಿಟ್ಟಿದ್ದರು. ಚಾಲಾಕಿಗಳು!

ಸಾರಾಂಶ

ಚಾಲಾಕಿ ಶ್ರೀಗಂಧ ಚೋರರು/  ಬಾವಿಯೊಳಗೆ ಶ್ರೀಗಂಧದ ತುಂಡುಗಳನ್ನು ಬಚ್ಚಿಟ್ಟಿದ್ದವರು ಸಿಕ್ಕಿಬಿದ್ದರು/ 3 ಲಕ್ಷ ಮೌಲ್ಯದ 38 ಕೆಜಿ ಶ್ರೀಗಂಧ ವಶ/ ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ನಡೆದ ದಾಳಿ 

ಶಿವಮೊಗ್ಗ(  ಡಿ. 02)  ಬಾವಿಯೊಳಗೆ ಬರೋಬ್ಬರಿ 38 ಕೆಜಿ ಶ್ರೀಗಂಧ ಬಚ್ಚಿಟ್ಟಿದ್ದ ಭೂಪ ಸಿಕ್ಕಿಬಿದ್ದಿದ್ದಾನೆ. ಶಿವಮೊಗ್ಗ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ವಲಯ ಅರಣ್ಯಾಧಿಕಾರಿ ಜಂಟಿ ಕಾರ್ಯಾಚರಣೆಯಲ್ಲಿ  ತಂಡವೊಂದು ಸಿಕ್ಕಿಬಿದ್ದಿದೆ.

ಅಕ್ರಮವಾಗಿ ಬಾವಿಯೊಂದರಲ್ಲಿ ಬಚ್ಚಿಟ್ಟಿದ್ದ ಅಂದಾಜು 3 ಲಕ್ಷ ಮೌಲ್ಯದ 38 ಕೆಜಿ ಶ್ರೀಗಂಧ ವಶಕ್ಕೆ ಪಡೆಯಲಾಗಿದೆ ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ಬಂಧನ ಮಾಡಲಾಗಿದೆ. 

ಸ್ಮಶಾನದ ಬಳಿ ಸಿಕ್ಕ ಒಂಟಿ ಕಾರು ಹೇಳಿದ ಮೂವತ್ತು ಕೋಟಿ ಕತೆ

ಅಕ್ರಮವಾಗಿ ಶ್ರೀಗಂಧ ತುಂಡುಗಳನ್ನು ಸಂಗ್ರಹಿಸಿದ್ದ ಬಾಣಿಗ ಗ್ರಾಮದ ಹನೀಫ್ ಸಾಬ್ ನನ್ನು ಬಂಧಿಸಲಾಗಿದೆ. ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿಟ್ಟಿದ್ದ. ಆರೋಪಿಯ ಚಾಣಾಕ್ಷತೆಯನ್ನು ಭೇದಿಸಿದ ಅಧಿಕಾರಿಗಳು ಶ್ರೀಗಂಧವನ್ನು ವಶ ಪಡಿಸಿಕೊಂಡಿದ್ದಾರೆ.

ಆರೋಪಿ ಹನೀಫ್ ಜೊತೆಗೆ ಮಂಜುನಾಥ್, ಹೊಸಕೆಸರೆ ಗ್ರಾಮದ ಹಾಲೇಶ್ , ಮತ್ತು ಸಾಗರದ  ಮಂಜುನಾಥ್ ಎಂಬುವವರ ಬಂಧನ ಮಾಡಲಾಗಿದೆ. ಹೊಸನಗರ ವಲಯ ಅರಣ್ಯಾಧಿಕಾರಿ ಕೃಷ್ಣ ಅಣ್ಣಯ್ಯಗೌಡ  ಹಾಗೂ ಅರಣ್ಯ ಸಂಚಾರಿ ದಳದ ಎಸಿ ಎಫ್ ಬಾಲಚಂದ್ರ ನೇತೃತ್ವದಲ್ಲಿ ನಡೆದ ದಾಳಿ ನಡೆಸಲಾಗಿತ್ತು

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!