ಕಾಕನೂರು ಎಸ್‌ಬಿಐ ಬ್ಯಾಂಕ್ ದರೋಡೆ: ಸಿನಿಮೀಯ ರೀತಿಯಲ್ಲಿ 10 ಲಕ್ಷಕ್ಕೂ ಅಧಿಕ ಹಣ ದೋಚಿ ಕಳ್ಳರು ಪರಾರಿ!

Published : Sep 03, 2025, 05:25 PM IST
Bagalkote sbi bank robbery

ಸಾರಾಂಶ

ಕಾಕನೂರಿನ ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ಯಾಸ್ ಕಟ್ಟರ್ ಬಳಸಿ ದರೋಡೆಕೋರರು 10 ಲಕ್ಷಕ್ಕೂ ಹೆಚ್ಚು ಹಣ ದೋಚಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳಿಗೆ ಪೇಂಟ್ ಸ್ಪ್ರೇ ಮಾಡಿ ದೃಶ್ಯಗಳನ್ನು ಮರೆಮಾಚಿದ ಕಳ್ಳರು ಲಾಕರ್‌ಗಳನ್ನು ಗುರಿಯಾಗಿಸಿಕೊಂಡಿದ್ದರು. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಬಾಗಲಕೋಟೆ (ಸೆ.3): ಜಿಲ್ಲೆಯ ಕಾಕನೂರು ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಕೋರರು ಗ್ಯಾಸ್ ಕಟರ್ ಬಳಸಿ ಬ್ಯಾಂಕ್‌ನ ಹಿಂಭಾಗದ ಶಟರ್ ಕೊರೆದು ಒಳನುಗ್ಗಿ, ಅಂದಾಜು 10 ಲಕ್ಷಕ್ಕೂ ಅಧಿಕ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳ್ಳರು ದರೋಡೆಗೆ ಮೊದಲು ಬ್ಯಾಂಕ್‌ನ ಸಿಸಿಟಿವಿ ಕ್ಯಾಮೆರಾಗಳಿಗೆ ಪೇಂಟ್ ಸ್ಪ್ರೇ ಮಾಡಿ ದೃಶ್ಯಗಳನ್ನು ಮರೆಮಾಚಿದ್ದಾರೆ. ಮೂರು ಲಾಕರ್‌ಗಳನ್ನು ಗುರಿಯಾಗಿಸಿದ್ದ ಕಳ್ಳರು, ಒಂದು ಲಾಕರ್‌ನಿಂದ ಹಣವನ್ನು ಕದ್ದು ಯಶಸ್ವಿಯಾಗಿ ಪರಾರಿಯಾಗಿದ್ದಾರೆ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಬಾದಾಮಿ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯಲ್ ಸ್ಥಳಕ್ಕೆ ಭೇಟಿ ನೀಡಿ, ಬ್ಯಾಂಕ್ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರು ಈ ಕೃತ್ಯವನ್ನು ಪ್ರೊಫೆಷನಲ್ ಕಳ್ಳರ ತಂಡವೇ ನಡೆಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ಕಲೆಹಾಕಲು ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಈ ದರೋಡೆಯು ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿದ್ದು, ಬ್ಯಾಂಕ್‌ಗಳ ಸುರಕ್ಷತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಘಟನೆಯಿಂದ ಬ್ಯಾಂಕ್ ಗ್ರಾಹಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ
ಬಾಗಲಕೋಟೆ ಎನ್‌ಜಿಒ: ವಿಶೇಷ ಚೇತನ ಮಕ್ಕಳಿಗೆ ಹೊಡೆದ ನಾಲ್ವರು ಬಂಧನ