ಬಾಗಲಕೋಟೆ: ಪತ್ನಿ, ಅಮ್ಮನಿಗೆ 1.60 ಕೋಟಿ ವರ್ಗಾಯಿಸಿದ ಎಸ್‌ಬಿಐ ಕ್ಯಾಶಿಯರ್‌..!

Published : Jun 09, 2022, 01:39 PM ISTUpdated : Jun 09, 2022, 02:03 PM IST
ಬಾಗಲಕೋಟೆ: ಪತ್ನಿ, ಅಮ್ಮನಿಗೆ 1.60 ಕೋಟಿ ವರ್ಗಾಯಿಸಿದ ಎಸ್‌ಬಿಐ ಕ್ಯಾಶಿಯರ್‌..!

ಸಾರಾಂಶ

*   ಬಾಗಲಕೋಟೆ ನವನಗರದ ಎಸ್‌ಬಿಐ ಶಾಖೆಯಲ್ಲಿ ನಡೆದ ಘಟನೆ *   ಸಂತೋಷ ಕಬಾಡೆ ಬ್ಯಾಂಕಿಗೆ ವಂಚನೆ ಮಾಡಿದ ಕ್ಯಾಶಿಯರ್‌ *   ಈ ಕುರಿತು ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ ಬ್ಯಾಂಕಿನ ಶಾಖಾ ವ್ಯವಸ್ಥಾಪಕ   

ಬಾಗಲಕೋಟೆ(ಜೂ.09):  ಬ್ಯಾಂಕ್‌ ಕ್ಯಾಶಿಯರ್‌ನಿಂದಲೇ 1.60 ಕೋಟಿ ಹಣ ಲಪಟಾಯಿಸಿರುವ ಘಟನೆ ಬಾಗಲಕೋಟೆ ನವನಗರ ವ್ಯಾಪ್ತಿಯ ಎಸ್‌ಬಿಐ ಶಾಖೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿ​ಸಿದಂತೆ ಬ್ಯಾಂಕಿನ ಕ್ಯಾಶಿಯರ್‌ ಸಂತೋಷ ಕಬಾಡೆ ವಿರುದ್ಧ ನವನಗರದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ನವನಗರದ ಎಸ್‌ಬಿಐ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂತೋಷ ಕಬಾಡೆ ಬ್ಯಾಂಕಿಗೆ ವಂಚನೆ ಮಾಡಿದ್ದು ಬ್ಯಾಂಕಿನ ಚೆಸ್ಟ್‌ನಲ್ಲಿರುವ ಹಣವನ್ನು ಯಾರಿಗೂ ಗೊತ್ತಾಗದಂತೆ ಪತ್ನಿ ಪೂಜಾ ಹಾಗೂ ತಾಯಿ ಜಾನಾಬಾಯಿ ಶಂಕರ ಕಬಾಡೆ ಅವರ ಖಾತೆಗೆ ಕಳೆದ ಮೂರು ತಿಂಗಳಿನಿಂದ ಜೂನ್‌ 4ರವರೆಗೆ ಟೇಲರ್‌ ಐಡಿಯಿಂದ ಬರುವ ನಂಬರ್‌ ಮೂಲಕ ಹಣ ವರ್ಗಾವಣೆ ಮಾಡಿಕೊಂಡಿರುವುದು ಬ್ಯಾಂಕಿನ ಹಿರಿಯ ವ್ಯವಸ್ಥಾಪಕರ ಗಮನಕ್ಕೆ ಬಂದ ನಂತರ ದೂರು ದಾಖಲಿಸಲಾಗಿದೆ.

ಸೀರೆ ವ್ಯಾಪಾರದ ಸೋಗಲ್ಲಿ ಬೆಂಗ್ಳೂರಲ್ಲಿ ಗಾಂಜಾ ಮಾರಾಟ: ಐವರ ಬಂಧನ

ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಅಲ್ಲಪ್ಪ ಲಕ್ಷಟ್ಟಿ ಎಂಬುವರು ಈ ಕುರಿತು ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ