
ಯಾದಗಿರಿ (ಫೆ.8): ಬಡ ವಿದ್ಯಾರ್ಥಿಗಳಿಗೆ ನೀಡಲಾಗಿರುವ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರನ್ನು ಶಿಕ್ಷಕನೋರ್ವ ಹಣದಾಸೆಗೆ ಕಿರಾಣಿ ಅಂಗಡಿಗೆ ಮಾರಾಟ ಮಾಡಿದ ಘಟನೆ ಯಾದಗಿರಿ ತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸೂರ್ಯಕಾಂತ್, ಹಾಲಿನ ಪೌಡರ್ ಮಾರಾಟ ಮಾಡಿದ ಧನದಾಹಿ ಮುಖ್ಯಶಿಕ್ಷಕ. ಸ್ವತಃ ತನ್ನ ಕಾರಿನಲ್ಲಿ ಹಾಲಿನ ಪಾಕೆಟ್ಗಳನ್ನು ತೆಗೆದುಕೊಂಡು ಬಂದು ಯಾದಗಿರಿ ನಗರದ ಬಿವಿ ಸ್ವಾಮಿ ಕಿರಾಣಿ ಹಾಗೂ ಜನರಲ್ ಸ್ಟೋರ್ ಅಂಗಡಿಗೆ ಮಾರಾಟ ಮಾಡಿರುವ ಆರೋಪಿ. ಹಲವು ವರ್ಷಗಳಿಂದ ಈ ರೀತಿ ಮಾರಾಟ ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಮಾರಾಟ ಮಾಡುತ್ತಿರುವ ಶಿಕ್ಷಕ ಸೂರ್ಯಕಾಂತ. ಹಾಲಿನ ಪೌಡರ್ ಮಾರಾಟ ಮಾಡುವ ವಿಡಿಯೋ ಇದೀಗ ಬಹಿರಂಗವಾಗಿದೆ.
ಯಾದಗಿರಿ: ಬಡವರ ಅಕ್ಕಿ ಕಾಳಸಂತೆಯ ಪಾಲು; ಪಡಿತರ ಕಳ್ಳಸಾಗಣೆ ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲ
ಬಡಮಕ್ಕಳಿಗೆ ಕೆನೆಭರಿತ ಹಾಲನ್ನು ನೀಡುವ ಕ್ಷೀರಭಾಗ್ಯ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಕನಸಿನ ಯೋಜನೆಗಳಲ್ಲೊಂದಾಗಿದೆ. ಗ್ರಾಮೀಣಮಟ್ಟದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆ ಮಾಡಲು ಕರ್ನಾಟಕ ಸರಕಾರ ಕ್ಷೀರಭಾಗ್ಯ ಯೋಜನೆ ತಂದಿದೆ. ಕೆನೆಭರಿತ ಹಾಲನ್ನು ನಿತ್ಯ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಹಾಲಿನ ಪೌಡರ್ ರೂಪದಲ್ಲಿ ಪಾಕೆಟ್ಗಳನ್ನು ವಿತರಿಸುತ್ತಿದೆ. ಆದರೆ ಮಕ್ಕಳ ಹೊಟ್ಟೆ ಸೇರಬೇಕಾದ ಹಾಲು ಧನದಾಹಿ ಮುಖ್ಯ ಶಿಕ್ಷಕನಿಂದ ಕಿರಾಣಿ ಅಂಗಡಿಗಳ ಪಾಲಾಗಿರುವುದು ದುರ್ದೈವದ ಸಂಗತಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ