
ತುಮಕೂರು(ನ.25): ಶಾಲಾ ಮಾಲೀಕನ ಮಗ ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಮನಬಂದಂತೆ ಥಳಿಸಿದ ಘಟನೆ ತುಮಕೂರು ಗ್ರಾಮಾಂತರದ ಮಲ್ಲಸಂದ್ರ ಗ್ರಾಮದ ವಿಶ್ವಭಾರತಿ ಶಾಲೆಯಲ್ಲಿ ನಡೆದಿದೆ. ವಿಶ್ವಭಾರತಿ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು ಶಾಲೆಯ ಮಾಲೀಕ ಎನ್. ಮೂರ್ತಿಯ ಮಗ ಭರತ್ ಎಂಬಾತನೇ ಯಾವುದೇ ಕಾರಣವಿಲ್ಲದೆ ಮಕ್ಕಳ ಮೇಳೆ ಥಳಿಸಿದ್ದಾನೆ ಅಂತ ಆರೋಪಿಸಲಾಗಿದೆ.
ಕುಡಿದ ಮತ್ತಿನಲ್ಲಿ ಬಂದ ಭರತ್ ಯಾವುದೇ ಕಾರಣ ಇಲ್ಲದೆ ಶಾಲೆಯ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದಾನೆ. ಶಾಲೆಯ ಮಕ್ಕಳ ಕೈಯಲ್ಲಿ ಮನೆಯ ಶೌಚಾಲಯ, ಕಾರು ತೊಳೆಸಿ, ಮಕ್ಕಳ ಕೈಯಲ್ಲಿ ಮನೆ ಕೆಲಸ ಮಾಡಿಸುತ್ತಿದ್ದನಂತೆ ಭರತ್.
Viral Video: ಕುಡಿದು ಟೈಟಾದ 4 ಯುವತಿಯರಿಂದ ಪಬ್ ಎದುರೇ ಮತ್ತೊಬ್ಬಳ ಮೇಲೆ ಥಳಿತ
ಭರತ್ ಪ್ರತಿನಿತ್ಯ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದನು. ಕುಡಿದ ಮತ್ತಿನಲ್ಲಿ ಬಂದು ಹಾಸ್ಟೆಲ್ನಲ್ಲಿದ್ದ 48 ಮಕ್ಕಳಿಗೆ ಥಳಿಸಿದ್ದಾನೆ. ಹಿಗ್ಗಾಮುಗ್ಗಾ ಥಳಿಸಿದ್ದರಿಂದ ದಾವಣೆಗೆರೆ ಮೂಲದ ಮೂವರು ಮಕ್ಕಳ ಮೂಳೆ ಮುರಿತವಾಗಿದೆ ಅ<ತ ತಿಳಿದು ಬಂದಿದೆ. ಶಾಲೆಗೆ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಭರತ್ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ