ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ದಾರುಣ ಸಾವು!

Published : Aug 15, 2024, 05:10 PM ISTUpdated : Aug 15, 2024, 05:12 PM IST
ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ದಾರುಣ ಸಾವು!

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯುತ್ ತಗುಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್‌ ಕಾವಲ್ ಬಳಿ ನಡೆದಿದೆ.

ತುಮಕೂರು (ಆ.15): ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯುತ್ ತಗುಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್‌ ಕಾವಲ್ ಬಳಿ ನಡೆದಿದೆ.

ಹೇಮಂತ್(8) ಮೃತ ಬಾಲಕ. ಹೆಚ್ ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ.  ಇಂದು 78ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಬೆಳಗ್ಗೆಯೇ ರೆಡಿಯಾಗಿ ಸಂಭ್ರಮದಿಂದ ಶಾಲೆಗೆ ತೆರಳಿದ್ದ ಬಾಲಕ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ದುರಂತ ನಡೆದುಹೋಗಿದೆ. ಬಾಲಕನ ಕುಟುಂಬಸ್ಥರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.  ಮಗನನ್ನ ಮುಂಜಾನೆ ಎಬ್ಬಿಸಿ ಸ್ವಾತಂತ್ರ್ಯೋತ್ಸವಕ್ಕೆ ಸಿಂಗರಿಸಿ ಕಳಿಸಿದ್ದರು. ಮನೆಗೆ ಬಂದ ಮಗನ ಮೃತ ಶರೀರ ಕಂಡು ಪೋಷಕರ ಅಕ್ರಂದನ ಮುಗಿಲು ಮುಟ್ಟಿತು.

 

ರಾಯಚೂರು: ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಮಣ್ಣು ಹಾಕಿದ ಜೆಸಿಬಿ ಚಾಲಕ, ಸ್ಥಳದಲ್ಲೇ ಸಾವು..!

ಕೆಇಬಿ ನಿರ್ಲಕ್ಷ್ಯ:

ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ ವೈರ್‌ಗೆ ವಿದ್ಯುತ್ ಪ್ರವಹಿಸಿದೆ ಬಾಲಕ ಕಂಬದ ಸಮೀಪ ತೆರಳುವಾಗ ಸ್ಪರ್ಶಿಸಿರುವ ಬಾಲಕ ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿರುವ ವಿದ್ಯಾರ್ಥಿ.  ಘಟನೆ ಬಳಿಕ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ ಕೆಇಬಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿದ್ಯಾರ್ಥಿ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಕೆಇಬಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!