
ರಬಕವಿ-ಬನಹಟ್ಟಿ(ಆ.30): ಕೋವಿಡ್ನಿಂದಾಗಿ ಶಾಲೆಗಳ ಬಾಗಿಲು ತೆರೆಯದ ಕಾರಣ, ಕಳೆದೆರಡು ವರ್ಷದಿಂದ ವೇತನ ಬಾರದೆ ಕುಟುಂಬ ನಿರ್ವಹಣೆ ಕಷ್ಟಕರವಾಗಿ ಖಾಸಗಿ ಶಾಲೆ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನಹಟ್ಟಿಯ ಸೋಮವಾರಪೇಟೆಯಲ್ಲಿ ಶನಿವಾರ ನಡೆದಿದೆ.
ಮಹಾದೇವ ಜಯವಂತ ಬಿಳ್ಳೂರ(38) ಸಾವಿಗೆ ಶರಣಾದ ಶಿಕ್ಷಕ. ಅವರಿಗೆ ಸೂಕ್ತವಾಗಿ ಸಂಬಳ ಲಭಿಸುತ್ತಿರಲಿಲ್ಲ. ಜತೆಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ 1 ಲಕ್ಷಕ್ಕೂ ಅಧಿಕ ಹಣ ವ್ಯಯ ಮಾಡಿದ್ದರು ಎಂದು ತಿಳಿದು ಬಂದಿದೆ.
ವಿಜಯಪುರ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೇಪ್ ಕೇಸ್ ಆರೋಪಿ ಆತ್ಮಹತ್ಯೆ
ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಮಹಾದೇವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಹೇಳಿದ್ದು, ಈ ಸಂಬಂಧ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ