ಹೆಂಡ್ತಿ ಜೊತೆ ಮಾತಾಡಿದ್ದಕ್ಕೆ ಗುಜುರಿ ವ್ಯಾಪಾರಿಯ ಕತೆ ಮುಗಿಸಿದ ಲೀವ್ ಇನ್ ಪಾರ್ಟನರ್‌

Published : Aug 03, 2025, 02:56 PM IST
Live In Partner, Kerala News, Crime News, Crime

ಸಾರಾಂಶ

ಗುರುಗ್ರಾಮದಲ್ಲಿ ಹೆಂಡತಿ ಜೊತೆ ಮಾತನಾಡಿದ್ದಕ್ಕೆ ಲೀವ್ ಇನ್ ಪಾರ್ಟನರ್ ಚಾಕುವಿನಿಂದ ಇರಿದು ಗುಜರಿ ವ್ಯಾಪಾರಿಯನ್ನು ಕೊಲೆ ಮಾಡಿದ್ದಾಳೆ. ಈ ಘಟನೆ ಡಿಎಲ್‌ಎಫ್‌ ಫೇಸ್-3 ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗುರುಗ್ರಾಮ: ಹೆಂಡ್ತಿ ಜೊತೆ ಮಾತಾಡಿದ್ದಕ್ಕೆ ಗುಜುರಿ ವ್ಯಾಪಾರಿಯೊಬ್ಬನನ್ನು ಆತನ ಲೀವ್ ಇನ್ ಪಾರ್ಟನರ್ ಚಾಕುವಿನಿಂದ ಇರಿದು ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಗುರುಗ್ರಾಮದ ಡಿಎಲ್‌ಎಫ್‌ ಫೇಸ್-3 ಪ್ರದೇಶದಲ್ಲಿ ನಡೆದಿದೆ. ಈಗಾಗಲೇ ವಿವಾಹವಾಗಿದ್ದ 40 ವರ್ಷದ ಸ್ಕ್ರ್ಯಾಪ್ ವ್ಯಾಪಾರಿ ಹರೀಶ್ ಶರ್ಮಾ ಕೊಲೆಯಾದ ವ್ಯಕ್ತಿ. ಗುರುಗ್ರಾಮದ ಬಲಿಯಾವಾಸ್ ಗ್ರಾಮದ ನಿವಾಸಿಯಾದ ಹರೀಶ್ ಶರ್ಮಾ, 27 ವರ್ಷ ಪ್ರಾಯದ ಯಶ್ಮಿತ್ ಕೌರ್ ಎಂಬಾಕೆಯ ಜೊತೆ ಕಳೆದ ಕೆಲ ವರ್ಷಗಳಿಂದ ಲೀವ್ ಇನ್ ರಿಲೇಷನ್‌ಶಿಪ್‌ನಲ್ಲಿ ಇದ್ದ. ಅವರಿಬ್ಬರು ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು.

ಊರಲ್ಲಿ ಪತ್ನಿ ಇದ್ದರೂ ಸಿಟಿಯಲ್ಲಿ ಲಿವ್ ಇನ್ ಪಾರ್ಟನರ್ ಜೊತೆ ವಾಸ:

ಶರ್ಮಾಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದರು, ಈತನ ಹೆಂಡ್ತಿ ಹಾಗೂ ಮಕ್ಕಳು ಗ್ರಾಮದ ಮನೆಯಲ್ಲಿ ವಾಸವಾಗಿದ್ದರು. ಹರೀಶ್ ಶರ್ಮಾನ ಪತ್ನಿಗೆ ಕೆಲ ಸಮಯದಿಂದ ಆರೋಗ್ಯ ಸರಿ ಇರಲಿಲ್ಲ, ಹೀಗಾಗಿ ಶರ್ಮಾ ತನ್ನ ಪತ್ನಿಗೆ ಆಗಾಗ್ಗೆ ಕರೆ ಮಾಡಿ ವಿಚಾರಿಸಿಕೊಳ್ಳುತ್ತಿದ್ದ. ಇದು ಆತನ ಲೀವ್ ಇನ್ ಪಾರ್ಟನರ್‌ ಯಶ್ಮಿತ್‌ ಕೌರ್‌ನನ್ನು ಕೆರಳಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಇದೇ ವಿಚಾರಕ್ಕೆ ಯಶ್ಮಿತ್ ಕೌರ್ ಹಾಗೂ ಹರೀಶ್ ಶರ್ಮಾ ಅವರಿಗೆ ಜಗಳವಾಗಿದೆ. ಇದಾದ ನಂತರ ಆತ ತನ್ನ ಪತ್ನಿಯೊಂದಿಗೆ ಮಾತನಾಡುತ್ತಿದ್ದಾಗ ಒಳಗೆ ಬಂದ ಯಶ್ಮಿತ್ ಕೌರ್ ಕೋಪದ ಭರದಲ್ಲಿ ಅಡುಗೆ ಮನೆಯಲ್ಲಿ ಬಳಸುತ್ತಿದ್ದ ಚಾಕುವಿನಿಂದ ಹರೀಶ್ ಶರ್ಮಾನ ಎದೆಗೆ ಇರಿದಿದ್ದಾಳೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿಗೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಕೊಲೆ ವೇಳೆ ರೂಮ್‌ನಲ್ಲಿದ್ದ ಶರ್ಮಾ ಸ್ನೇಹಿತ

ಹಾಗೆಯೇ ಘಟನೆಯಲ್ಲಿ ಮೃತಪಟ್ಟ ಹರೀಶ್ ಸ್ನೇಹಿತ ವಿಜಯ್ ಅಲಿಯಾಸ್ ಸೇಥಿ ಕೂಡ ಘಟನೆ ನಡೆಯುವ ವೇಳೆ ಅವರ ಮನೆಯ ಮತ್ತೊಂದು ಕೋಣೆಯಲ್ಲಿ ಇದ್ದ ಬಗ್ಗೆ ವರದಿಯಾಗಿದ್ದು, ಆತನ ಕೈವಾಡವೂ ಈ ಪ್ರಕರಣದಲ್ಲಿ ಇರಬಹುದೇ ಎಂಬ ಬಗ್ಗೆ ಪೊಲೀಸರು ತನಿಎ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹರೀಶ್‌ ಶರ್ಮಾನ ಅಳಿಯ ಪೊಲೀಸರಿಗೆ ದೂರು ನೀಡಿದ್ದು, ಯಶ್ಮಿತ್ ಕೌರ್ ಹಾಗೂ ವಿಜಯ್‌ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈಗ ಪೊಲೀಸರು ದೆಹಲಿಯ ಅಶೋಕನಗರ ನಿವಾಸಿಯಾದ ಯಶ್ಮಿತ್ ಕೌರ್‌ನನ್ನು ಬಂಧಿಸಿದ್ದು, ಆಕೆ ಘಟನೆಯ ಬಗ್ಗೆ ತಪ್ಪೊಪ್ಪಿಕೊಂಡಿದ್ದಾಳೆ. ಆಕೆಯ ಬಳಿಯಿಂದ ಕೊಲೆಗೆ ಬಳಸಿದ ಚಾಕು ಹಾಗೂ ರಕ್ತಸಿಕ್ತ ಟೀಶರ್ಟ್‌ನನ್ನು ವಶಕ್ಕೆ ಪಡೆಯಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ