
ಬೆಂಗಳೂರು (ಜೂ 11) ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ದೇಶದ್ರೋಹ ಪ್ರಕರಣದಲ್ಲಿ ಬಂಧಿಯಾಗಿದ್ದ ಅಮೂಲ್ಯಾ ಲಿಯೋನಾಗೆ ಜಾಮೀನು ಸಿಕ್ಕಿದೆ.
ಷರತ್ತುಬದ್ದ ಜಾಮೀನು ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸದ ಕಾರಣ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ. ಜೂ.10 ರಂದು ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು
ಬುದ್ಧಿ ಹೇಳಿದರೂ ಕೇಳದೇ ಜೈಲು ಸೇರಿದ್ದ ಅಮೂಲ್ಯಾ
ಜಾಮೀನು ನೀಡಿದರೆ ಕೃತ್ಯ ಪುನರಾವರ್ತನೆ ಸಾಧ್ಯತೆ ಇದ್ದು ಸಮಾಜದಲ್ಲಿ ಅಶಾಂತಿ ಮೂಡಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು. ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆ ತಾಂತ್ರಿಕ ಕಾರಣದಿಂದ ಜಾಮೀನು ಸಿಕ್ಕಿದೆ. ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ್ದ ಸಿವಿಲ್ ಮತ್ತು ಸೆಶನ್ಸ್ ಕೋರ್ಟ್, ವಿದ್ಯಾರ್ಥಿಯಾಗಿರುವ 19 ವರ್ಷದ ಅಮೂಲ್ಯಾ ಬಿಡುಗಡೆಯಾದರೆ ತಲೆಮರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ