ಅಫಜಲ್ಪುರ: ಮದುವೆ ಸಂಭ್ರಮದಲ್ಲಿದ್ದಾಗಲೇ ಮನೆಗೆ ಕನ್ನ..!

Published : Jul 16, 2023, 11:00 PM IST
ಅಫಜಲ್ಪುರ: ಮದುವೆ ಸಂಭ್ರಮದಲ್ಲಿದ್ದಾಗಲೇ ಮನೆಗೆ ಕನ್ನ..!

ಸಾರಾಂಶ

ಮದುವೆ ಕಾರ್ಯಕ್ರಮ ಹಿನ್ನೆಲೆ ಕುಟುಂಬಸ್ಥರೆಲ್ಲರೂ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಅಕ್ಷತಾರೋಹಣ ಕಾರ್ಯಕ್ರಮಕ್ಕೆ ಹೋದಾಗ ಮನೆಗೆ ಕನ್ನ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಮದುವೆ ಸಂಭ್ರಮದಲ್ಲಿದ್ದ ಸಂಬಂಧಿಕರೆಲ್ಲರೂ ಆತಂಕ ವ್ಯಕ್ತಪಡಿಸಿ ಕಲ್ಯಾಣ ಮಂಟಪದಿಂದ ಓಡೋಡಿ ಮನೆಗೆ ಧಾವಿಸಿದರು. ಕಳ್ಳನ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಅಫಜಲ್ಪುರ(ಜು.16):  ಅಫಜಲ್ಪುರ ಪಟ್ಟಣದ ಸಂಗು ಡಿಜಿಟಲ್‌ ಪ್ರಿಂಟಿಂಗ್‌ ಪ್ರೆಸ್‌ ಮಾಲೀಕ ಸಂಗನಬಸಪ್ಪ ಪತ್ತಾರ ಅವರ ಮಗನ ಮದುವೆ ದಿನದಂದೇ ಮನೆಗೆ ನುಗ್ಗಿದ ಕಳ್ಳರು ಕನ್ನ ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ಜರುಗಿದೆ.

ಪಟ್ಟಣದ ಹೊರವಲಯದಲ್ಲಿರುವ ಮಳೇಂದ್ರ ಶಿವಾಚಾರ್ಯರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಮದುವೆ ಕಾರ್ಯಕ್ರಮ ಹಿನ್ನೆಲೆ ಕುಟುಂಬಸ್ಥರೆಲ್ಲರೂ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಅಕ್ಷತಾರೋಹಣ ಕಾರ್ಯಕ್ರಮಕ್ಕೆ ಹೋದಾಗ ಮನೆಗೆ ಕನ್ನ ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಮದುವೆ ಸಂಭ್ರಮದಲ್ಲಿದ್ದ ಸಂಬಂಧಿಕರೆಲ್ಲರೂ ಆತಂಕ ವ್ಯಕ್ತಪಡಿಸಿ ಕಲ್ಯಾಣ ಮಂಟಪದಿಂದ ಓಡೋಡಿ ಮನೆಗೆ ಧಾವಿಸಿದರು. ಕಳ್ಳನ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Bengaluru crime: 2 ವಾರಗಳ ಹಿಂದೆ ಬಿಡುಗಡೆ ಆಗಿ ಮನೆಗೆ ಕನ್ನ ಹಾಕಿ ಮತ್ತೆ ಜೈಲು ಸೇರಿದ! 

ಒಂದು ಮನೆ ಕಳ್ಳತನ ನಡೆಸಿದ ಬಳಿಕ ಪಕ್ಕದ ಸಿದ್ದು ಡಾಂಗೆ, ಕಿರಾನಂದ ಪತ್ತಾರ, ಬಸವರಾಜ ನೂಲಾ ಹೀಗೆ ಒಟ್ಟು ಹಾಡಹಗಲೇ 4 ಮನೆಗಳಲ್ಲಿ ಸರಣಿ ಕಳ್ಳತನಕ್ಕೆ ಪ್ರಯತ್ನಿಸಿ ಹಣ ಹಾಗೂ ಬೆಳ್ಳಿ ಮತ್ತು ಬಂಗಾರದ ಒಡವೆಗಳನ್ನು ದೋಚಲಾಗಿದೆ. ಸದ್ಯಕ್ಕೆ ಯಾರ ಮನೆಯಲ್ಲಿ ಏನೆಲ್ಲ ಕಳ್ಳತನವಾಗಿದೆ ಎಂಬ ನಿಖರವಾದ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!