Sexual assault: 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಫಿರೋಜ್‌ಖಾನ್ ಅರೆಸ್ಟ್

Published : Feb 11, 2023, 01:28 PM IST
Sexual assault: 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಫಿರೋಜ್‌ಖಾನ್ ಅರೆಸ್ಟ್

ಸಾರಾಂಶ

ನಗರದಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕವನ್ನುಂಟು ಮಾಡಿದೆ. ಕಾಮುಕನೊಬ್ಬ 8 ವರ್ಷದ ಬಾಲಕಿ‌ ಮೇಲೆ ಲೈಂಗಿಕ ದೌರ್ಜನ್ಯ (sexual harassment)ಎಸಗಿರುವ ಘಟನೆ ವಿವೇಕನಗರ(viveknagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು (ಫೆ.11) : ನಗರದಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕವನ್ನುಂಟು ಮಾಡಿದೆ.

ಕಾಮುಕನೊಬ್ಬ 8 ವರ್ಷದ ಬಾಲಕಿ‌ ಮೇಲೆ ಲೈಂಗಿಕ ದೌರ್ಜನ್ಯ (sexual harassment)ಎಸಗಿರುವ ಘಟನೆ ವಿವೇಕನಗರ(viveknagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಗ್ಯಾರೇಜ್‌ನಲ್ಲಿ ಕ್ಲೀನರ್ ಕೆಲಸ ಮಾಡಿಕೊಂಡಿದ್ದಕಾಮುಕ ವಿಕೃತಿ ಮೆರೆದಿದ್ದಾನೆ.  ಪಶ್ಚಿಮ ಬಂಗಾಳ ಮೂಲದ ಬಾಲಕಿಯ ಕುಟುಂಬ ಜೀವನ ಆಶ್ರಯಿಸಿ 2  ವರ್ಷದ ಹಿಂದೆ ಬೆಂಗಳೂರಿಗೆ ಬಂದು ಈಜೀಪುರದಲ್ಲಿ ವಾಸವಾಗಿದ್ರು. ದೌರ್ಜನ್ಯಕ್ಕೊಳಗಾದ ಬಾಲಕಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಬೆಳಗ್ಗೆ ಎಂದಿನಂತೆ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಎದುರಿಗೆ ಬಂದ ಆರೋಪಿ ನಿನ್ನ ಬಳಿ ಮಾತನಾಡಬೇಕು ಎಂದು ಪುಸಲಾಯಿಸಿ ಬಾಲಕಿಯನ್ನು ತಾನೂ ಕೆಲಸ ಮಾಡುತ್ತಿದ್ದ ಗ್ಯಾರೇಜ್ ಒಳಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಬಾಲಕಿಯ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಗಾಬರಿಯಾದ ಬಾಲಕಿ ಆರೋಪಿಯಿಂದ ತಪ್ಪಿಸಿಕೊಂಡು ಅಳುತ್ತಾ ಹೊರಬಂದು ತಾಯಿಯ ಬಳಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. 

Pocso case: 13 ವರ್ಷದ ಬಾಲೆ ಗರ್ಭಿಣಿ, ಸ್ವತಃ ತಂದೆಯಿಂದಲೇ ನಡೆದಿದೆ ಪಾಪ ಕೃತ್ಯ!

ಮಗಳ ಮೇಲಾದ ದೌರ್ಜನ್ಯದ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಕಾಮುಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. 

ಸದ್ಯ ಪೊಲೀಸರು ಆರೋಪಿ ಫಿರೋಜ್ ಖಾನ್(Feroze Khan) ನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?