
ಬೆಂಗಳೂರು(ಸೆ.17): ಚರ್ಚ್ನಲ್ಲಿ ಲೈಟ್ ಆಫ್ ಮಾಡಲು ಹೋಗಿದ್ದ ಮಹಿಳೆಗೆ ಚಾಕು ತೋರಿಸಿ ದುರುಳನೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ವಿಲಿಯಂ ಪ್ರಕಾಶ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅಶೋಕ ನಗರದ ಶಾಂತಲಾ ನಗರದಲ್ಲಿ ಸೆ.10ರಂದು ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯ ಸಮೀಪದ ಚರ್ಚ್ನಲ್ಲಿ ಸಂತ್ರಸ್ತೆಯ ಪತಿ ಕೆಲಸ ಮಾಡುತ್ತಿದ್ದು, ಸೆ.10ರ ಸಂಜೆ ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದರು.
ರೇಪ್ ಮಾಡಿ ಇನ್ನಷ್ಟು ಮಂದಿ ಜೊತೆ ಸೆಕ್ಸ್ ಮಾಡುವಂತೆ ಹಿಂಸೆ, ಯುವತಿ ಖಾಸಗಿ ಫೋಟೊ ಲೀಕ್
ಪತಿಯ ಸೂಚನೆ ಮೇರೆಗೆ ರಾತ್ರಿ ಸಂತ್ರಸ್ತೆ, ಚರ್ಚ್ ಲೈಟ್ ಆಫ್ ಮಾಡಲು ಒಬ್ಬರೇ ಹೋಗಿದ್ದಾರೆ. ಈ ವೇಳೆ ಹಿಂಬಾಲಿಸಿಕೊಂಡು ಬಂದಿರುವ ಆರೋಪಿ ವಿಲಿಯಂ, ಏಕಾಏಕಿ ಮಹಿಳೆಯನ್ನು ಒಳಗೆ ಎಳೆದು ಚಾಕು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಕೂಗಲು ಮುಂದಾದಾಗ, ಕೊಲೆ ಬೆದರಿಕೆ ಹಾಕಿದ್ದಾನೆ. ಬಳಿಕ ಮಹಿಳೆ ಆತನನ್ನು ತಳ್ಳಿ ಓಡಿ ಬಂದಿದ್ದಾರೆ. ಪತ್ನಿಯ ಚೀರಾಟ ಕೇಳಿ ಪತಿ ಮನೆಯಿಂದ ಹೊರ ಬಂದಿದ್ದು, ವಿಲಿಯಂನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಆತ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ