ಬೆಂಗಳೂರು: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ?

Published : Nov 23, 2023, 06:45 AM IST
ಬೆಂಗಳೂರು: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ?

ಸಾರಾಂಶ

ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಯುವತಿ ಕಾಲೇಜಿಗೆ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೋ ಏರುವಾಗ ದಟ್ಟಣೆ ಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೋ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ರೆಡಿಟ್‌ನಲ್ಲಿ ಸ್ನೇಹಿತರು ಬರೆದುಕೊಂಡಿದ್ದಾರೆ.

ಬೆಂಗಳೂರು(ನ.23):  ಇತ್ತೀಚೆಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಮೆಟ್ರೋ ರೈಲು ಹತ್ತಿದ ಯುವತಿಗೆ ಲೈಂಗಿಕ ಕಿರುಕುಳವಾಗಿದೆ ಎಂದು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಂಬಂಧ ಉಪ್ಪಾರಪೇಟೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

‘ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಯುವತಿ ಕಾಲೇಜಿಗೆ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೋ ಏರುವಾಗ ದಟ್ಟಣೆ ಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೋ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ರೆಡಿಟ್‌ನಲ್ಲಿ ಸ್ನೇಹಿತರು ಬರೆದುಕೊಂಡಿದ್ದಾರೆ.

ಡಿಸಿಪಿ ಕಚೇರಿ ಮುಂಭಾಗವೇ ನಡೆಯಿತು ಯುವತಿ ಮೇಲೆ ದೌರ್ಜನ್ಯ; ಬಟ್ಟೆ ಹಿಡಿದು ಎಳೆದಾಡಿ ಕಾಮುಕ ಎಸ್ಕೇಪ್!

ಸಿಸಿ ಕ್ಯಾಮೆರಾ ಪರಿಶೀಲನೆ: 

ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌, ಮೆಟ್ರೋದಲ್ಲಿ ದಟ್ಟಣೆ ಅವಧಿಯಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಘಟನೆ ಕುರಿತು ಇದುವರೆಗೂ ಯಾರೂ ದೂರು ನೀಡಿಲ್ಲ. ಈಗಾಗಲೇ ನಾವು ಸಿಸಿ ಟಿ.ವಿ ಕ್ಯಾಮೆರಾ ಪರಿಶೀಲನೆ ಆರಂಭಿಸಿದ್ದೇವೆ. ಮಹಿಳೆಯರು ಆದ್ಯತೆ ಮೇರೆಗೆ ಮಹಿಳಾ ಬೋಗಿಯಲ್ಲಿ ಸಂಚರಿಸಿ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರಹಸ್ಯ ಬಯಲು; FIR ನಂತ್ರವೂ ಜನರಿಂದ ಹೂಡಿಕೆ
9 ಕೋಟಿ ರೂ. ಮಾನನಷ್ಟ ಮೊಕದ್ದಮೆ ಕೇಸ್​: ಕೋರ್ಟ್​ಗೆ ಹಾಜರಾಗದ ನಟ ಸುದೀಪ್​- ಏನಿದು ಪ್ರಕರಣ