ಶಕ್ತಿ ಯೋಜನೆ ಅವಾಂತರ: ಫ್ರೀ ಬಸ್ ಹತ್ತಿ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತ ಬಾಲಕಿಯರು ತಿಂಥಿಣಿ ಜಾತ್ರೆಯಲ್ಲಿ ಪತ್ತೆ!

Published : Feb 23, 2024, 11:27 AM ISTUpdated : Feb 23, 2024, 11:29 AM IST
 ಶಕ್ತಿ ಯೋಜನೆ ಅವಾಂತರ:  ಫ್ರೀ ಬಸ್ ಹತ್ತಿ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತ ಬಾಲಕಿಯರು ತಿಂಥಿಣಿ ಜಾತ್ರೆಯಲ್ಲಿ ಪತ್ತೆ!

ಸಾರಾಂಶ

ಮನೆಯಲ್ಲಿ ಪೋಷಕರಿಗೆ ತಿಳಿಸದೇ ನಾಲ್ವರು ಅಪ್ರಾಪ್ತ ಬಾಲಕಿಯರು ಬಸ್ ಹತ್ತಿ ಹೋಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ ನಡೆದಿದೆ. ಒಂದೇ ಊರಿನ ಅಕ್ಕಪಕ್ಕದ ಮನೆಯವರಾದ ಬಾಲಕಿಯರು. ಆಧಾರ್ ಕಾರ್ಡ್‌ ಕೈಯಲ್ಲಿಡಿದು ಬಸ್ ಹತ್ತಿರುವ ಹೋಗಿದ್ದಾರೆ. ಪೊಲೀಸರು ವಿಶೇಷ ತಂಡ ರಚಿಸಿ ಮಕ್ಕಳನ್ನು ಪತ್ತೆ ಹಚ್ಚಿದ್ದಾರೆ

ರಾಯಚೂರು (ಫೆ.23): ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಉದ್ದೇಶದಿಂದ ಜಾರಿಗೆ 'ಶಕ್ತಿ ಯೋಜನೆ' ಮಹಿಳೆಯರಿಗೆ ಅನುಕೂಲ ಆಗುವುದರ ಜೊತೆಗೆ ಸಾಕಷ್ಟು ಅವಾಂತರಗಳಗಳಾಗಿವೆ. ಸೀಟಿಗಾಗಿ ಹೊಡೆದಾಟ, ಕಂಡಕ್ಟರ್ ನಡುವೆ ಜಗಳ, ಇದರ ಜೊತೆ ಉಚಿತ ಪ್ರಯಾಣವೆಂದು ಚಿಕ್ಕಮಕ್ಕಳು ಮನೆಬಿಟ್ಟು ಹೋದ ಘಟನೆಗಳು ನಡೆದಿವೆ. ಅದರ ಅವೆಲ್ಲವುಗಳ ಸಾಲಿಗೆ ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಅವಾಂತರ ನಡೆದುಹೋಗಿದೆ.

ಮನೆಯಲ್ಲಿ ಪೋಷಕರಿಗೆ ತಿಳಿಸದೇ ನಾಲ್ವರು ಅಪ್ರಾಪ್ತ ಬಾಲಕಿಯರು ಬಸ್ ಹತ್ತಿ ಹೋಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ ನಡೆದಿದೆ. ಒಂದೇ ಊರಿನ ಅಕ್ಕಪಕ್ಕದ ಮನೆಯವರಾದ ಬಾಲಕಿಯರು. ಆಧಾರ್ ಕಾರ್ಡ್‌ ಕೈಯಲ್ಲಿಡಿದು ಬಸ್ ಹತ್ತಿರುವ ಹೋಗಿದ್ದಾರೆ. ಆದರೆ ರಾತ್ರಿಯಾದರೂ ಮನೆಗೆ ಬಾರದ್ದು ಕಂಡು ಪೋಷಕರು ಆತಂಕಕ್ಕೊಳಗಾಗಿ ಪೊಲೀಸರಿಗೆ ದೂರು ನೀಡಿದ್ದರು. ಮಕ್ಕಳ ನಾಪತ್ತೆ ಪ್ರಕರಣ ಗಂಭೀರವಾಗಿ ಪರಿಗಣಿಸಿದ ಲಿಂಗಸೂಗೂರು ಪೊಲೀಸರು. ಅಪ್ರಾಪ್ತ ಬಾಲಕಿಯರ ಪತ್ತೆಗೆ ವಿಶೇಷ ತಂಡ ರಚಿಸಿ ಹುಡುಕಾಟ ನಡೆಸಿದ್ದರು.

ಮುಂದುವರಿದ ಶಕ್ತಿ ಯೋಜನೆ ಅವಾಂತರ: ಸೀಟು ಹಿಡಿಯಲು ಹೋದ ವೃದ್ಧ ಬಸ್ಸಿನ ಚಕ್ರಕ್ಕೆ ಸಿಲುಕಿ ತೀವ್ರ ಗಾಯ!

ತಿಂಥಿಣಿ ಮೌನೇಶ್ ಜಾತ್ರೆಯಲ್ಲಿ ಪತ್ತೆ!

ನಾಪತ್ತೆಯಾದ ಮಕ್ಕಳಿಗಾಗಿ ಲಿಂಗಸೂಗೂರು ಸುತ್ತಮುತ್ತ ಹಳ್ಳಿಗಳಲ್ಲಿ ಹುಡುಕಾಟ ನಡೆಸಿದ್ದ ಪೊಲೀಸರು. ಒಂದು ತಂಡ ತಿಂಥಿಣಿ ಮೌನೇಶ್ವರ ಜಾತ್ರೆಯಲ್ಲೂ ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ 

ಮುಂದುವರಿದ ಮಹಿಳೆಯರ 'ಶಕ್ತಿ' ಪ್ರದರ್ಶನ; ಕಂಡಕ್ಟರ್, ಡ್ರೈವರ್ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!

ತಿಂಥಣಿ ಜಾತ್ರೆಯಲ್ಲಿ ಪತ್ತೆಯಾದ ನಾಲ್ವರು ಬಾಲಕಿಯರು. ತಿಂಥಿಣಿ ಜಾತ್ರೆಯಲ್ಲಿ ಪ್ರಸಾದ ಸ್ವೀಕರಿಸಿ ಜಾತ್ರೆಯಲ್ಲಿ ತಿರುಗಾಡಿದ್ದ ಬಾಲಕಿಯರು ದೇವಸ್ಥಾನದ ಬಳಿ ವಿಶ್ರಾಂತಿಗೆ ಕುಳಿತಿದ್ದಾಗ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಬಾಲಕಿಯರ ಕೈಯಲ್ಲಿ ಆಧಾರ್ ಕಾರ್ಡ್ ಇರುವುದು ಪತ್ತೆಯಾಗಿದೆ. ತಿಂಥಿಣಿ ಮೌನೇಶ್ವರ ಜಾತ್ರೆಗೆ ಬಂದಿರುವುದಾಗಿ ಪೊಲೀಸರಿಗೆ ತಿಳಿಸಿರುವ ಬಾಲಕಿಯರು ಬಳಿಕ ನಾಲ್ವರು ಬಾಲಕಿಯರನ್ನು  ಪೊಲೀಸ್ ಠಾಣೆಗೆ ಕರೆತಂದು ಪೋಷಕರಿಗೆ ಒಪ್ಪಿಸಿದ್ದಾರೆ. ಒಟ್ಟಿನಲ್ಲಿ ಫ್ರೀ ಪ್ರಯಾಣದಿಂದ ಮಕ್ಕಳಿಗೆ ಚಿನ್ನಾಟ ಹೆತ್ತವರಿಗೆ ಪ್ರಾಣಸಂಕಟ ಎಂಬಂತಾಗಿ ಕೊನೆಗೆ ಸುರಕ್ಷಿತವಾಗಿ ಮನೆ ಸೇರಿರುವ ಬಾಲಕಿಯರು. ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು