ಕುಕ್ಕರ್‌ ಬಾಂಬ್‌ ಸ್ಫೋಟ: ಶಂಕಿತ ಉಗ್ರ ಶಾರೀಕ್‌ಗೆ ಬರುತ್ತಿದ್ದ ಹಣದ ಮೂಲದ ಬಗ್ಗೆ ತನಿಖೆ

Published : Dec 01, 2022, 09:40 AM ISTUpdated : Dec 01, 2022, 09:48 AM IST
ಕುಕ್ಕರ್‌ ಬಾಂಬ್‌ ಸ್ಫೋಟ: ಶಂಕಿತ ಉಗ್ರ ಶಾರೀಕ್‌ಗೆ ಬರುತ್ತಿದ್ದ ಹಣದ ಮೂಲದ ಬಗ್ಗೆ ತನಿಖೆ

ಸಾರಾಂಶ

ಸುಟ್ಟ ಗಾಯಗಳಿಗೆ ಒಳಗಾಗಿರುವ ಶಾರೀಕ್‌ ವಿಚಾರಣೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪೂರ್ಣ ಗುಣಮುಖನಾದ ಬಳಿಕ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ನಿರ್ಧರಿಸಿದ ಪೊಲೀಸರು

ಮಂಗಳೂರು(ಡಿ.01): ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಕ್ಕರ್‌ ಬಾಂಬ್‌ದ ರೂವಾರಿ, ಶಂಕಿತ ಉಗ್ರ ಶಾರೀಕ್‌ನ್ನು ಮೂರನೇ ದಿನ ಬುಧವಾರವೂ ಪೊಲೀಸ್‌ ತಂಡ ವಿಚಾರಣೆ ನಡೆಸಿತು. ಸುಟ್ಟಗಾಯಗಳಿಗೆ ಒಳಗಾಗಿರುವ ಆತ ವಿಚಾರಣೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪೂರ್ಣ ಗುಣಮುಖನಾದ ಬಳಿಕ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.

ಶಂಕಿತ ಉಗ್ರ ಶಾರೀಕ್‌ಗೆ ಬರುತ್ತಿದ್ದ ಹಣದ ಮೂಲದ ಬಗ್ಗೆ ಮಾಹಿತಿ ಪೊಲೀಸ್‌ ತನಿಖಾ ತಂಡ ಮಾಹಿತಿ ಕಲೆ ಹಾಕುತ್ತಿದೆ. ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸುತ್ತಿದೆ. ಈತ ಮೈಸೂರಿನ ಹಲವರ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿರುವ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಶಾರೀಕ್‌ಗೆ ಬರುತ್ತಿದ್ದ ಹಣದ ಮೂಲದ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ಕಲೆಹಾಕಿದ್ದಾರೆ. ಡಾರ್ಕ್ ವೆಬ್‌ ಮೂಲಕ ಅಕೌಂಟ್‌ ತೆರೆದಿರುವ ಶಾರೀಕ್‌ ಡಾಲರ್‌ಗಳ ಮೂಲಕ ಹಣ ವರ್ಗಾವಣೆ ನಡೆಸುತ್ತಿದ್ದ. ಡಾಲರ್‌ಗಳನ್ನು ಭಾರತೀಯ ಕರೆನ್ಸಿಯಾಗಿ ಪರಿವರ್ತಿಸಿ ಹಲವಾರು ಅಕೌಂಟ್‌ಗಳಿಗೆ ಹಣ ವರ್ಗಾಯಿಸುತ್ತಿದ್ದ. ಜಾರ್ಖಂಡ್‌, ಮಧ್ಯಪ್ರದೇಶ, ತಮಿಳುನಾಡಿನಲ್ಲಿ ಶಾರೀಕ್‌ನ ಹಣದ ಮೂಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Mangaluru Bomb Blast: ಶಾರೀಕ್‌ಗಿತ್ತು ಶರಿಯಾ ಕಾನೂನು ಜಾರಿ ಇಚ್ಛೆ!

ಪೊಲೀಸರು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವ ಮೊದಲೇ ಎನ್‌ಐಎ ತಂಡ ಶಾರೀಕ್‌ನ್ನು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸಲು ಈಗಾಗಲೇ ಅಂತಿಮ ಸಿದ್ಧತೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು