ಕುಕ್ಕರ್‌ ಬಾಂಬ್‌ ಸ್ಫೋಟ: ಶಾರೀಕ್‌ಗೆ ಶೀಘ್ರ ಮಂಗಳೂರಲ್ಲೂ ಸ್ಥಳ ಮಹಜರು ತನಿಖೆ

Published : Mar 11, 2023, 01:30 AM IST
ಕುಕ್ಕರ್‌ ಬಾಂಬ್‌ ಸ್ಫೋಟ: ಶಾರೀಕ್‌ಗೆ ಶೀಘ್ರ ಮಂಗಳೂರಲ್ಲೂ ಸ್ಥಳ ಮಹಜರು ತನಿಖೆ

ಸಾರಾಂಶ

ಶಿವಮೊಗ್ಗದಲ್ಲಿ ಸ್ಥಳ ಮಹಜರು ಬಳಿಕ ಶಾರೀಕ್‌ನ್ನು ಎನ್‌ಐಎ ತಂಡ ಮಂಗಳೂರಿಗೆ ಕರೆತರಲಿದೆ. ಮಂಗಳೂರಿನ ಕಂಕನಾಡಿಯ ಘಟನಾ ಸ್ಥಳದಲ್ಲಿ ಸ್ಥಳ ಮಹಜರು ನಡೆಸಲಿದೆ. ಇಡೀ ಘಟನೆಯ ರೀ ಟೇಕ್‌ ಮಾಡಿಸುವ ಸಾಧ್ಯತೆ ಇದೆ. 

ಮಂಗಳೂರು(ಮಾ.11): ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ವಶದಲ್ಲಿರುವ ಆರೋಪಿ ಶಿವಮೊಗ್ಗದ ಶಾರೀಕ್‌ನ್ನು ಸ್ಥಳ ಮಹಜರು ಪ್ರಕ್ರಿಯೆಗೆ ಮಂಗಳೂರಿಗೆ ಕರೆತರುವ ಸಾಧ್ಯತೆ ಇದೆ.

ನವೆಂಬರ್‌ 10ರಂದು ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿದ್ದು, ಈ ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಸಹಿತ ಆರೋಪಿ, ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌(24) ಗಂಭೀರ ಗಾಯಗೊಂಡಿದ್ದ. ಒಂದು ತಿಂಗಳ ಚಿಕಿತ್ಸೆ ಬಳಿಕ ಶಾರೀಕ್‌ನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆದೊಯ್ದು ಅಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದರು. ಈಗ ಶಾರೀಕ್‌ ಗುಣಮುಖನಾಗಿದ್ದು, ಆತನನ್ನು ಕಸ್ಟಡಿಗೆ ಪಡೆದು ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ. ಸಂತ್ರಸ್ತ ಪುರುಷೋತ್ತಮ ಪೂಜಾರಿ ಗುಣಮುಖರಾಗಿ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದಾರೆ.

ಕುಕ್ಕರ್‌ ಬಾಂಬ್‌ ಬಗ್ಗೆ ಈಗ ಡಿಕೆಶಿ ಏನೆನ್ನುತ್ತಾರೆ?: ಸಿಎಂ ಬೊಮ್ಮಾಯಿ ತಿರುಗೇಟು

ಶಂಕಿತ ಉಗ್ರ ಶಾರೀಕ್‌ ಮೊಹಮ್ಮದ್‌ ಶಾರೀಕ್‌ನ್ನು ಮಂಗಳವಾರ ಎನ್‌ಐಎ ತಂಡ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕರೆತಂದಿದ್ದು, ಅಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಈತನ ವಿರುದ್ಧ ಕಳೆದ ಸಪ್ಟೆಂಬರ್‌ 19ರಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಟ್ರಾಯಲ್‌ ಬ್ಲಾಸ್ಟ್‌ಗೆ ಸಂಬಂಧಿಸಿ ಕೇಸು ದಾಖಲಾಗಿತ್ತು. ಅಲ್ಲದೆ ಅಮಿರ್‌ ಅಹ್ಮದ್‌ ಸರ್ಕಲ್‌ ಬಳಿ ಪ್ರೇಮ್‌ ಸಿಂಗ್‌ ಇರಿತ ಪ್ರಕರಣದಲ್ಲೂ ಎನ್‌ಐಎ ತನಿಖೆ ಕೈಗೊಂಡಿದೆ.

ಶಿವಮೊಗ್ಗದಲ್ಲಿ ಸ್ಥಳ ಮಹಜರು ಬಳಿಕ ಶಾರೀಕ್‌ನ್ನು ಎನ್‌ಐಎ ತಂಡ ಮಂಗಳೂರಿಗೆ ಕರೆತರಲಿದೆ. ಮಂಗಳೂರಿನ ಕಂಕನಾಡಿಯ ಘಟನಾ ಸ್ಥಳದಲ್ಲಿ ಸ್ಥಳ ಮಹಜರು ನಡೆಸಲಿದೆ. ಇಡೀ ಘಟನೆಯ ರೀ ಟೇಕ್‌ ಮಾಡಿಸುವ ಸಾಧ್ಯತೆ ಇದೆ. ಅಲ್ಲದೆ ಶಾರೀಕ್‌ ಆಟೋದಲ್ಲಿ ಬಂದ ಬಗೆ, ಆತ ಮಂಗಳೂರಿಗೆ ಬಂದಾಗ ಎಲ್ಲೆಲ್ಲಿ ಸಂಚರಿಸಿದ್ದ ಎನ್ನುವ ಮಾಹಿತಿಯನ್ನು ಈಗಾಗಲೇ ಕಲೆಹಾಕಿರುವ ಎನ್‌ಐಎ ತಂಡ ಅಂತಹ ಕಡೆಗಳಲ್ಲೆಲ್ಲ ಸ್ಥಳ ಮಹಜರು ನಡೆಸಲಿದೆ. ಆತ ಆಸ್ಪತ್ರೆಗೆ ದಾಖಲಾಗಿರುವಲ್ಲಿ ವರೆಗಿನ ಶಾರೀಕ್‌ನ ಎಲ್ಲ ಮಂಗಳೂರಿನ ಹೆಜ್ಜೆ ಬಗ್ಗೆ ಎನ್‌ಐಎ ತಂಡ ಮಹಜರು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಶಂಕಿತ ಉಗ್ರ ಶಾರೀಕ್‌ ಮಂಗಳೂರಿಗೂ ಬರುವುದಕ್ಕೆ ಮುನ್ನ ಮೈಸೂರು, ಕೇರಳ, ತಮಿಳ್ನಾಡು ಪ್ರದೇಶಗಳಲ್ಲಿ ಸಂಚರಿಸಿದ್ದಾನೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕಿದ್ದು, ಅಲ್ಲಿಗೂ ಆತನನ್ನು ಕರೆದುಕೊಂಡು ಹೋಗಿ ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ