ಕೊನೆಗೂ ರಾಜ್ ಕುಂದ್ರಾಗೆ ಜಾಮೀನು.. ಯಾವ ಪಾಯಿಂಟ್ ನೆರವಿಗೆ ಬಂತು?

Published : Sep 20, 2021, 10:59 PM ISTUpdated : Sep 20, 2021, 11:00 PM IST
ಕೊನೆಗೂ ರಾಜ್ ಕುಂದ್ರಾಗೆ ಜಾಮೀನು.. ಯಾವ ಪಾಯಿಂಟ್ ನೆರವಿಗೆ ಬಂತು?

ಸಾರಾಂಶ

* ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣ * ಉದ್ಯಮಿ ರಾಜ್ ಕುಂದ್ರಾಗೆ ಕೊನೆಗೂ ಜಾಮೀನು *. 50 ಸಾವಿರ ರೂಪಾಯಿಗಳ ಶ್ಯೂರಿಟಿ * ಬಲಿಪಶು ಮಾಡಲಾಗಿದೆ ಎಂದ ಕುಂದ್ರಾ

ಮುಂಬೈ(ಸೆ. 20) ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ  ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಕೊನೆಗೂ ಜಾಮೀನು ಸಿಕ್ಕಿದೆ.  ಕುಂದ್ರಾ ಮತ್ತು ಅವರ  ಸಹಾಯಕರಾಗಿದ್ದ ರಯಾನ್ ಥೋರ್ಪೆ ಗೆ ಜಾಮೀನು ಸಿಕ್ಕಿದೆ.

ಕುಂದ್ರಾ ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ಭಾಗಿಯಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಪ್ರಕರಣದಲ್ಲಿ ಕುಂದ್ರಾ ರನ್ನು ಬಲಿಪಶು ಮಾಡಲಾಗಿದೆ ಎಂದು  ವಕೀಲರು ವಾದ ಮುಂದಿಟ್ಟಿದ್ದರು. ಜುಲೈ 19 ರಂದು ಕುಂದ್ರಾ ಬಂಧನವಾಗಿತ್ತು. 

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹಾಗೂ ರಯಾನ್ ಥಾರ್ಪ್‌ಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇರೆಗೆ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.

ಪತಿ ಕುಂದ್ರಾ ವಿರುದ್ಧ ಪತ್ನಿ ಶಿಲ್ಪಾಳೆ ಸಾಕ್ಷಿ!

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ತಮ್ಮನ್ನು ‘ಬಲಿಪಶು’ ಮಾಡಲಾಗುತ್ತಿದೆ. ಅಶ್ಲೀಲ ಚಿತ್ರಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಸಾಕ್ಷ್ಯ ಸಪ್ಲಿಮೆಂಟರಿ ಚಾರ್ಜ್‌ಶೀಟ್‌ನಲ್ಲಿಲ್ಲ ಎಂದು ಜಾಮೀನಿಗೆ ಮನವಿ ಮಾಡಿ ಸೆಪ್ಟೆಂಬರ್ 18 ರಂದು ನ್ಯಾಯಾಲಯಕ್ಕೆ ರಾಜ್ ಕುಂದ್ರಾ ಅರ್ಜಿ ಸಲ್ಲಿಸಿದ್ದರು. ಪರಿಣಾಮ ಇವತ್ತು ರಾಜ್ ಕುಂದ್ರಾಗೆ ಜಾಮೀನು ಸಿಕ್ಕಿದೆ.

ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು 1,400 ಪುಟಗಳ  ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು.  ಈ ಮೂಲಕ ಸದ್ಯದ ಮಟ್ಟಿಗೆ ಕುಂದ್ರಾ ಜೈಲು ವಾಸ ಮುಕ್ತಾಯವಾಗಿದೆ.

ಕುಂದ್ರಾ ವಿರುದ್ಧ ಸಾಕಷ್ಟು ದಾಖಲೆ ಸಿಕ್ಕಿವೆ ಎಂದು ಪೊಲೀಸರು ಹೇಳಿದ್ದರು. ಪತ್ನಿ ಶಿಲ್ಪಾ ಶೆಟ್ಟಿ ವೂಷ್ಣೋದೇವಿಗೆ ತೆರಳಿ ಸಂಕಷ್ಟದಿಂದ ಪಾರು ಮಾಡುವಂತೆ ದೇವರಲ್ಲಿ ಮೊರೆ ಇಟ್ಟಿದ್ದರು .

ರಾಜ್ ಕುಂದ್ರಾ ಅವರ ಈ-ಮೇಲ್‌ಗಳು, ರಾಜ್ ಕುಂದ್ರಾ ಮತ್ತು ಇತರೆ ಆರೋಪಿಗಳ ನಡುವಿನ ವಾಟ್ಸ್‌ಆಪ್ ಚಾಟ್‌ಗಳು, 24 ಹಾರ್ಡ್‌ ಡಿಸ್ಕ್ ವಿವರಗಳು, ರಾಜ್ ಕುಂದ್ರಾ ಅವರ ಹಣಕಾಸಿನ ವಿವರಗಳನ್ನು ಪೊಲೀಸರು ಸಲ್ಲಿಕೆ ಮಾಡಿದ್ದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!