ಮಗನ ಮದುವೆಗೆ ಸಂಬಂಧಿಕರನ್ನು ಅಹ್ವಾನಿಸಲು ಮೈಸೂರಿಗೆ ತೆರಳಿದ್ದ ತಂದೆ ಬಸ್‌ನಲ್ಲೇ ಹೃದಯಾಘಾತದಿಂದ ಸಾವು

Published : Nov 28, 2023, 09:27 AM ISTUpdated : Nov 28, 2023, 12:40 PM IST
ಮಗನ ಮದುವೆಗೆ ಸಂಬಂಧಿಕರನ್ನು ಅಹ್ವಾನಿಸಲು ಮೈಸೂರಿಗೆ ತೆರಳಿದ್ದ ತಂದೆ ಬಸ್‌ನಲ್ಲೇ ಹೃದಯಾಘಾತದಿಂದ ಸಾವು

ಸಾರಾಂಶ

ಸಂಬಂಧಿಕರನ್ನು ಮಗನ ಮದುವೆಗೆ ಆಹ್ವಾನಿಸಲು ಮೈಸೂರಿಗೆ ತೆರಳಿದ್ದ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಸಮೀಪದ ಸಂತೆಕೊಪ್ಪದ ಸೀತಾರಾಮ ಎಸ್. ಬೆಳಂದೂರ್ (62)  ಬಸ್ಸಿನಲ್ಲೇ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ತೀರ್ಥಹಳ್ಳಿ: (ನ.28): ಸಂಬಂಧಿಕರನ್ನು ಮಗನ ಮದುವೆಗೆ ಆಹ್ವಾನಿಸಲು ಮೈಸೂರಿಗೆ ತೆರಳಿದ್ದ ತಾಲೂಕಿನ ವ್ಯಕ್ತಿಗೆ ಬಸ್ಸಿನಲ್ಲೇ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ತಾಲೂಕಿನ ಹೆದ್ದೂರು ಸಮೀಪದ ಸಂತೆಕೊಪ್ಪದ ಸೀತಾರಾಮ ಎಸ್. ಬೆಳಂದೂರ್ (62) ಮೃತವ್ಯಕ್ತಿ. ಫೆ.19ರಂದು ಮಗನ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಸಂಬಂಧಿಕರನ್ನು ಆಹ್ವಾನಿಸಲು ಭಾನುವಾರ ಮೈಸೂರಿಗೆ ತೆರಳಿದ್ದರು. ಸ್ನೇಹಿತರ ಮನೆಯಲ್ಲಿ ತಂಗಿದ್ದ ಅವರು ಸೋಮವಾರ ಬೆಳಗ್ಗೆ ಮೈಸೂರು ಸಮೀಪದ ಶ್ರೀರಂಗಪಟ್ಟಣದ ಸಂಬಂಧಿಕರ ಮನೆಗೆ ಬಸ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೆಂಗಳೂರು ರಸ್ತೆಯ ಮೈಸೂರಿನ ಬನ್ನಿ ಮಂಟಪದ ಬಳಿ ಬಸ್ಸಿನಲ್ಲೇ ಹೃದಯಾಘಾತವಾಗಿ ಮೃತರಾಗಿದ್ದಾರೆ.

ಬಸ್ ಚಾಲಕ ಮೃತರ ಬಳಿಯಿದ್ದ ಆಹ್ವಾನ ಪತ್ರಿಕೆಯಲ್ಲಿ ದೂರವಾಣಿ ಮೂಲಕ ಬೆಂಗಳೂರಿನಲ್ಲಿರುವ ಸೀತಾರಾಮ್ ಪುತ್ರ ಸುಮುಖ ಭಾರ್ಗವ ಅವರನ್ನು ಸಂಪರ್ಕಿಸಿ, ವಿಷಯ ತಿಳಿಸಿದರು. ಮಾಹಿತಿ ಮೇರೆಗೆ ಮೈಸೂರಿಗೆ ಧಾವಿಸಿದ ಸುಮುಖ ಭಾರ್ಗವ ತಂದೆಯ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತರಲಾಗಿದ್ದು, ರಾತ್ರಿ ಅಂತಿಮಕ್ರಿಯೆ ನಡೆಸಲಾಗಿದೆ.

ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಮತ್ತು ಸಂಘಟನೆ ಪ್ರಮುಖರು ಮೃತರ ಅಂತಿಮ ದರ್ಶನ ಪಡೆದು, ಸಂತಾಪ ವ್ಯಕ್ತಪಡಿಸಿದರು.

ಸಮಾಜಸೇವೆ:

ಸೀತಾರಾಮ ಎಸ್. ಬೆಳಂದೂರು ಅವರು ಸಮಾಜಮುಖಿ ಕಾರ್ಯದಲ್ಲೂ ತೊಡಗಿದ್ದರು. ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಸೇವಾಭಾರತಿ ಸಂಘಟನೆಯಿಂದ ನಡೆಯುವ ಮಹಿಳೆಯರಿಗೆ ಹೊಲಿಗೆ ಕಲಿಸುವ ಮುಂತಾದ ಸೇವಾ ಕಾರ್ಯಗಳಲ್ಲಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!