ಶಿರಾಳಕೊಪ್ಪ ಸಂತೆ ಬಳಿ ನಿಗೂಢ ಸ್ಫೋಟ; ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು?

Published : Feb 18, 2024, 04:59 PM IST
ಶಿರಾಳಕೊಪ್ಪ ಸಂತೆ ಬಳಿ ನಿಗೂಢ ಸ್ಫೋಟ; ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು?

ಸಾರಾಂಶ

ಹಂದಿಗೆ ಇಡಲು ತಂದಿದ್ದ ಸಿಡಿಮದ್ದು ಸ್ಫೋಟಗೊಂಡಿದೆ. ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್ ಮತ್ತು ರೂಪ ದಂಪತಿಯ ಬ್ಯಾಗ್‌ನಲ್ಲಿದ್ದ ಸಿಡಿಮದ್ದು, ಪರಿಚಯದವರ ಅಂಗಡಿಯಲ್ಲಿಟ್ಟು ಸಂತೆಗೆ ಹೊಗಿದ್ದ ವೇಳೆ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದರು.

ಶಿವಮೊಗ್ಗ (ಫೆ.18) ಶಿವಮೊಗ್ಗ ಶಿರಾಳಕೊಪ್ಪ ಬಸ್ ನಿಲ್ದಾಣ ಸಮೀಪದ ಫುಟ್ಪಾತ್‌ನಲ್ಲಿ ನಿಗೂಢ ವಸ್ತು ಸ್ಫೋಟಗೊಂಡು ಭಾರೀ ಆತಂಕ ಸೃಷ್ಟಿಸಿದ್ದ ಘಟನೆ ಸಂಬಂಧ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಹಂದಿಗೆ ಇಡಲು ತಂದಿದ್ದ ಸಿಡಿಮದ್ದು ಸ್ಫೋಟಗೊಂಡಿದೆ. ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್ ಮತ್ತು ರೂಪ ದಂಪತಿಯ ಬ್ಯಾಗ್‌ನಲ್ಲಿದ್ದ ಸಿಡಿಮದ್ದು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ಅಂತೋನಿ ದಂಪತಿಗೆ ಪರಿಚಯವಿದ್ದ. ದಂಪತಿ ಶೀಟ್ ಖರೀದಿಸಲು ಅಂಗಡಿಹೋಗಿದ್ದಾಗ ಬ್ಯಾಗ್ ಅಂಗಡಿಯಲ್ಲಿಟ್ಟು ಸಂತೆ ಹೋಗಿದ್ದ ದಂಪತಿ. ಕೆಲಹೊತ್ತಿನ ಬಳಿಕ ಬ್ಯಾಗ್‌ನಲ್ಲಿದ್ದ ಸಿಡಿಮದ್ದು ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳ ಕುರಿತು ಮಾಹಿತಿ ಲಭ್ಯವಾಗಿದ್ದು ಅವರ ವಿಚಾರಣೆ ಮಾಡಲಾಗುತ್ತದೆ. ಇನ್ನು ಸಿಡಿಮದ್ದು ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು, ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

ಧಾರವಾಡ ಕೇಂದ್ರ ಕಾರಾಗೃಹದ  ಕೈದಿಗಳ ಮಧ್ಯೆ ಮಾರಾಮಾರಿ; ಮಲ್ಲೇಶ್ವರ ಬಾಂಬ್‌ ಬ್ಲಾಸ್ಟ್ ಕೈದಿಗೆ ಇರಿದ ಪಾತಕಿ ಪಚ್ಚಿ!

ಬೆಚ್ಚಿಬಿದ್ದ ಜನರು:

ಹೆಚ್ಚು ಜನಜಂಗುಳಿ ಇರುವ ಬಸ್ ನಿಲ್ದಾಣದ ಸಮೀಪದ ಫುಟ್ಪಾತ್‌ನಲ್ಲಿ ಇದ್ದಕ್ಕಿದ್ದಂತೆ ಬ್ಯಾಗ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಇಬ್ಬರು ಗಾಯಗೊಂಡಿದ್ದ ಸುತ್ತಲು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದ ಸ್ಥಳೀಯರು. ಸ್ಥಳಕ್ಕೆ ಶಿರಾಳಕೊಪ್ಪ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದರು. ಇದೀಗ ಅದು ಹಂದಿಬೇಟೆಗೆ ಬಳಸುವ ಮದ್ದು ಎಂಬುದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಆದರೆ ಸ್ಫೋಟಕ ವಸ್ತುಗಳನ್ನು ಬೇಜವಾಬ್ದಾರಿಯಿಂದ ಬಳಸಿರುವುದು ಇದೀಗ ಪೊಲೀಸರು ಹೆಚ್ಚಿನ ವಿಚಾರಣೆಗೆ ಮುಂದಾಗಿದ್ದಾರೆ.  

ಹರ್ದಾ ಬ್ಲಾಸ್ಟ್‌ ವೇಳೆ ದಿವ್ಯಾಂಗ ತಂದೆಯ ಜೀವ ಉಳಿಸಿ ಗಾಯಗೊಂಡಿದ್ದ 8 ವರ್ಷದ ಬಾಲಕ ಸಾವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಬಿಗ್ ತೀರ್ಪು
ಪ್ರೀತಿಗಾಗಿ ಪ್ರಾಣ ಬಿಟ್ಟ ಸತ್ಯವ್ವ: 12ನೇ ವಯಸ್ಸಿನಲ್ಲೇ ಮದುವೆ ಫಿಕ್ಸ್ ಮಾಡಿ ಮಗಳ ಬದುಕನ್ನೇ ಕಸಿದುಕೊಂಡ ಪೋಷಕರು