
ಶಿವಮೊಗ್ಗ (ಜು.2): ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಕೆರೆ ಬಳಿ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಕಡೂರಿನಿಂದ ಸಾಗರಕ್ಕೆ ಕೋಳಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಕ್ಯಾಂಟರ್, ಎದುರಿಗೆ ಬಂದ ಬಸ್ಗೆ ಡಿಕ್ಕಿ ತಪ್ಪಿಸಲು ಚಾಲಕ ಯತ್ನಿಸಿದಾಗ ನಿಯಂತ್ರಣ ತಪ್ಪಿ ಕೆರೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಲಾರಿಯಲ್ಲಿದ್ದ 1700 ಕೋಳಿಗಳ ಪೈಕಿ 700 ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
Mysore Bus Accident: ಮೈಸೂರಿನಲ್ಲಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ
ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸ್ಥಳೀಯರು ಸಾವನ್ನಪ್ಪಿದ ಕೋಳಿಗಳನ್ನು ಕೊಂಡೊಯ್ಯಲು ಮುಗಿಬಿದ್ದ ದೃಶ್ಯ ಕಂಡುಬಂದಿದೆ. ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಮೈಸೂರಿನ ಬಹುಭಾಗ ಆವರಿಸಿದ ಭಾರೀ ಹೊಗೆ | Fire accident near exhibition | Suvarna News
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ