
ಶಿವಮೊಗ್ಗ, (ನ. 14): ಪದವಿ ವಿದ್ಯಾರ್ಥಿನಿಯೋರ್ವಳು ಮನೆ ಬಳಿ ಮರಣಕ್ಕೆ ನೇಣುಬಿಗಿದು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ನಡೆದಿದೆ.
ಪ್ರಾಪ್ತಿ (21), ಮೃತ ದುರ್ದೈವಿ. ರಮೇಶ್ ಆಚಾರ ಎಂಬುವವರ ಪುತ್ರಿಯಾಗಿರುವ ಮೃತ ವಿದ್ಯಾರ್ಥಿನಿ. ಇಂದು ಬೆಳಗಿನ ಜಾವ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಾಪ್ತಿ ಪತ್ತೆಯಾಗಿದ್ದಾಳೆ.
ಬಾಳೆಬೈಲಿನ ಪದವಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ಪದವಿ ಓದುತ್ತಿದ್ದ ಪ್ರಾಪ್ತಿ, ಬೆಳಗ್ಗೆ ಜಾವ ನೇಣುಬಿಗಿದ ಸ್ಥಿತಿಯಲ್ಲಿರುವುದು ಕಂಡು ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಶೈಕ್ಷಣಿಕ ಒತ್ತಡದಿಂದ ನೇಣುಬಿಗಿದುಕೊಂಡಳಾ, ಇನ್ನೇನಾದರೂ ತೊಂದರೆಯಲ್ಲಿದ್ದಳಾ, ಪ್ರಾಪ್ತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಪ್ತಿಯ ಕುಟುಂಬಸ್ಥರು, ಸ್ನೇಹಿತರು, ಕಾಲೇಜು ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿ ಪ್ರಾಪ್ತಿ ಸಾವಿಗೆ ಕಾರಣ ಏನು ಎಂಬ ಬಗ್ಗೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ