
ಬೆಂಗಳೂರು(ಡಿ. 01) ಮಾಜಿ ಸಚಿವರನ್ನೇ ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಇದು ಕರ್ನಾಟಕದ ಕೋಲಾರದ್ದೇ ಪ್ರಕರಣ. ಮಾಜಿ ಸಚಿವ ವರ್ತೂರ್ ಪ್ರಕಾಶ್ ಅವರನ್ನು ಅಪಹರ ಮಾಡಿ ಹಲ್ಲೆ ಮಾಡಲಾಗಿದೆ.
ಹಲ್ಲೆ ಮಾಡಿ ನನ್ನ ಬಳಿ 30 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನ ಡೈವರ್ ಮೇಲೂ ಹಲ್ಲೆಯಾಗಿದೆ. ನಮ್ಮ ಡ್ರೈವರ್ ಸುನೀಲ್ ಘಟನೆ ನಡೆದ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ. ಅವನ ಮೇಲು ಕೂಡ ಹಲ್ಲೆಯಾಗಿದೆ. ಮೂರು ದಿನಗಳ ಬಳಿಕ ಹೊಸಕೋಟೆಯಲ್ಲಿ ನನನ್ನು ಬಿಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ವರ್ತೂರು ಹೇಳಿದ್ದಾರೆ.
ಕೊನೆಗೂ ಬಯಲಾಯ್ತು ಬಾಲಕನ ಕಿಡ್ನಾಪ್ ಕಹಾನಿ.. ಸಿನಿಮಾ ಅಲ್ಲ
ಕೋಲಾರದ ಚೌಡೇಶ್ವರಿ ಆಸ್ಪತ್ರೆಯಲ್ಲಿ ಆ್ಯಕ್ಸಿಡೆಂಟ್ ಆಗಿದೆ ಎಂದು ವರ್ತೂರು ಚಿಕಿತ್ಸೆ ಪಡೆದುಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಯತ್ನ ಮಾಡಿದ್ದರೆ ಪ್ರಕಾಶ್? ಎಂಬುದು ತನಿಖೆ ನಂತರವೇ ಗೊತ್ತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ