Nagarbhavi schoking: ಬಿರಿಯಾನಿಗೆ ಚಟ್ನಿ ಕೊಡದಿದ್ದಕ್ಕೆ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು!

Kannadaprabha News   | Kannada Prabha
Published : Aug 09, 2026, 09:59 AM IST
Shocking incident in Nagarbhavi Thugs brutally beat up hotel staff for not providing chutney with biryani

ಸಾರಾಂಶ

ಬೆಂಗಳೂರಿನ ಚಂದ್ರಲೇಔಟ್‌ನಲ್ಲಿ ಮಷ್ರೂಮ್ ಬಿರಿಯಾನಿಗೆ ಚಟ್ನಿ ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕಿಡಿಗೇಡಿಗಳ ಗುಂಪೊಂದು ಹೋಟೆಲ್ ಧ್ವಂಸ ಮಾಡಿದೆ. ಈ ವೇಳೆ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕ್ಯಾಶ್ ಕೌಂಟರ್ ಜಖಂಗೊಳಿಸಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು (ಆ.9): ಮಷ್ರೂಮ್ ಬಿರಿಯಾನಿಗೆ ಚಟ್ನಿ ಕೊಟ್ಟಿಲ್ಲವೆಂಬ ಕ್ಷುಲ್ಲಕ್ಕ ಕಾರಣಕ್ಕೆ ಕಿಡಿಗೇಡಿಗಳು ಹೋಟೆಲ್‌ ಧ್ವಂಸ ಮಾಡಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಂದ್ರಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಘಟನೆಯ ಸಂಬಂಧ ಹೊಟೇಲ್‌ ಸಿಬ್ಬಂದಿ ರಂಜಿತ್ ಎಂಬುವರು ನೀಡಿದ ದೂರಿನನ್ವಯ ಅರುಣ್‌ ಎಂಬಾತನ ವಿರುದ್ಧ ಗಂಭೀರವಲ್ಲದ ಪ್ರಕರಣ (ಎನ್‌ಸಿಆರ್‌) ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೋಟೆಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

ಆ.4 ರ ರಾತ್ರಿ ಅಪ್ಪು ಮಷ್ರೂಮ್ ದಮ್ ಬಿರಿಯಾನಿ ಹೋಟೆಲ್‌ಗೆ ಕಿಡಿಗೇಡಿಗಳ ತಂಡ ಬಂದಿತ್ತು. ಈ ವೇಳೆ ಬಿರಿಯಾನಿಗೆ ಚಟ್ನಿ ಯಾಕೆ ಕೊಟ್ಟಿಲ್ಲವೆಂದು ಸಿಬ್ಬಂದಿ ರಂಜಿತ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಹೋಟೆಲ್‌ ಮುಂದೆ ಇದ್ದ ಟೆಂಟ್, ಕ್ಯಾಶ್ ಕೌಂಟರ್ ಧ್ವಂಸಗೊಳಿಸಿದ್ದಾರೆ. ಅಂಗಡಿಯಲ್ಲಿದ್ದ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಆರಂಭದಲ್ಲಿ ಪೊಲೀಸರು ನಿರಾಕರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಕಿಡಿಗೇಡಿಗಳು ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೀನು ಕೊಲ್ಲದಿದ್ರೆ ಗಂಡನ ನಾನೇ ಹ*ತ್ಯೆ ಮಾಡ್ತೀನಿ: ಲವರ್‌ಗೆ ಮೆಸೇಜ್‌ ಕಳುಹಿಸಿದ ಮಹಿಳೆ
ಬೆಂಗಳೂರಲ್ಲಿ ಪಾಪಿ ಪತಿಯಿಂದ ಪೈಶಾಚಿಕ ಕೃತ್ಯ.. ಪತ್ನಿಯ ಜೀವ ತೆಗೆದು ಮೋರಿಗೆ ಎಸೆದ! ಕಾರಣ?