ಏರ್‌ಗನ್‌ನಿಂದ ಗಾಳಿಯಲ್ಲಿ ಗುಂಡು; ಚಿಕ್ಕಮಗಳೂರಿನ ಇಬ್ಬರು ಯುವಕರ ಬಂಧನ

Published : Dec 31, 2023, 12:24 PM IST
ಏರ್‌ಗನ್‌ನಿಂದ ಗಾಳಿಯಲ್ಲಿ ಗುಂಡು; ಚಿಕ್ಕಮಗಳೂರಿನ ಇಬ್ಬರು ಯುವಕರ ಬಂಧನ

ಸಾರಾಂಶ

ನಗರದ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆತಂಕ ಸೃಷ್ಟಿಸಿದ್ದ ಪ್ರಕರಣದಲ್ಲಿ ಶಿವಮೊಗ್ಗ ತುಂಗಾ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆ ಸಿರಗನಹಳ್ಳಿಯ ಹರ್ಷ ಪಟೇಲ್‌ (23) ಮತ್ತು ಅಜ್ಜಂಪುರದ ಅಭಿಷೇಕ್‌ (23) ಬಂಧಿತರು. ಬಂಧಿತರಿಂದ ಏರ್‌ಗನ್ ಮತ್ತು ವಶಕ್ಕೆ ಪಡೆದ ಪೊಲೀಸರು.

ಶಿವಮೊಗ್ಗ (ಡಿ.31): ನಗರದ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆತಂಕ ಸೃಷ್ಟಿಸಿದ್ದ ಪ್ರಕರಣದಲ್ಲಿ ಶಿವಮೊಗ್ಗ ತುಂಗಾ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆ ಸಿರಗನಹಳ್ಳಿಯ ಹರ್ಷ ಪಟೇಲ್‌ (23) ಮತ್ತು ಅಜ್ಜಂಪುರದ ಅಭಿಷೇಕ್‌ (23) ಬಂಧಿತರು. ಬಂಧಿತರಿಂದ ಏರ್‌ಗನ್ ಮತ್ತು ವಶಕ್ಕೆ ಪಡೆದ ಪೊಲೀಸರು.

ಏನಿದು ಘಟನೆ?

ಡಿ.26ರಂದರು ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ನಡೆದಿದ್ದ ಘಟನೆ. ಕಾರಿನಲ್ಲಿ ಬಂದಿದ್ದ ಆರೋಪಿಗಳು ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಕೆಳಗಿಳಿದು ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇನ್ನೊಬ್ಬ ಆರೋಪಿ ಏರ್‌ ಗನ್‌ ಹಿಡಿದುಕೊಂಡಿದ್ದು ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಏಕಾಏಕಿ ನಡೆದ ಘಟನೆಯಿಂದ ಗುಂಡಿನ ಶಬ್ದ ಕೇಳಿ ರಸ್ತೆಯಲ್ಲಿ ಓಡಾಡುತ್ತಿದ್ದವರು ಕೆಲ ಕಾಲ ಆತಂಕಕ್ಕೀಡಾಗಿದ್ದರು. ಕೆಲವರು ಇದು ಗೂಂಡಿನ ದಾಳಿ ಆತಂಕದಲ್ಲಿ ಓಡಿದ್ದರು.

ತುಂಡುಡುಗೆ ಧರಿಸುತ್ತಾಳೆಂದು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ!

ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಳಿಕ ಪರಿಶೀಲನೆ ನಡೆಸಿದ್ದ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಜಾಗರೂಕತೆ ಮತ್ತು ಬೇಜವಾಬ್ದಾರಿ ತೋರಿದ ಹಿನ್ನೆಲೆ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲು ಮಾಡಿಕೊಂಡು ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಇದೀಗ ಚಿಕ್ಕಮಗಳೂರು ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು.

ಮಾನ್ಯ ಸಿದ್ದರಾಮಯ್ಯ ಅವರಿಗೆ ಸಾಷ್ಟಾಂಗ ನಮಸ್ಕಾರಗಳು: ಸಹೋದರನ ಬಂಧಿಸಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಭಾವುಕ ನುಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ