
ಬೆಂಗಳೂರು, (ಡಿ.18): ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಸಿಕ್ಕ-ಸಿಕ್ಕ ಕಡೆಗಳಲ್ಲಿ ಹಣ ಕೀಳುತ್ತಿದ್ದವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ತ್ಯಾಗರಾಜನಗರದ ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ. ಭೀಮ್ ಚಂದ್ ಎಂಬುವವರಿಗೆ ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟು ಈಗ ಬೆಂಗಳೂರಿನ ಸಿದ್ದಾಪುರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
PSI ಹುದ್ದೆ ಕೊಡಿಸ್ತೀನಿ ಎಂದು 31 ಲಕ್ಷ ರೂಪಾಯಿಗೂ ಹೆಚ್ಚು ವಂಚನೆ
ಚಿಕ್ಕಪೇಟೆ, ಎಸ್.ಪಿ ರೋಡ್ ಮಾರ್ವಾಡಿಗಳೆ ಇವನ ಟಾರ್ಗೆಟ್ ಆಗಿದ್ದರು. ಹಣ ಕೊಡಬೇಕು ಇಲ್ಲ ಬೆಟ್ಟಿಂಗ್ ಕೇಸ್ ನಲ್ಲಿ ಅರೆಸ್ಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ.
ಸಿದ್ದಾಪುರ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ನಕಲಿ ಐಪಿಎಸ್ ಅಧಿಕಾರಿ ಭರತ್ ಸಿಕ್ಕಿಬಿದ್ದಿದ್ದಾನೆ. ಅಧಿಕಾರಿಗಳ ಹೆಸರು ಹೇಳಿಕೊಂಡು ನಿಮ್ಮನ್ನೂ ಕಾಡಬಹುದು. ಯಾವುದಕ್ಕೂ ಹುಷಾರ್ ಆಗಿರುವುದು ಒಳ್ಳೆಯದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ