ಶಿವಮೊಗ್ಗ: ಒಂಟಿ ಮನೆ ದರೋಡೆಗೆ ಯತ್ನ, ಪಶ್ಚಿಮ ಬಂಗಾಳ ವ್ಯಕ್ತಿ ಬಂಧನ

Published : Sep 18, 2023, 04:24 PM IST
ಶಿವಮೊಗ್ಗ: ಒಂಟಿ ಮನೆ ದರೋಡೆಗೆ ಯತ್ನ, ಪಶ್ಚಿಮ ಬಂಗಾಳ ವ್ಯಕ್ತಿ ಬಂಧನ

ಸಾರಾಂಶ

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಸಾಗರ (ಸೆ.18) : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪಶ್ಚಿಮಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆ, ಭಗಂಗೋಲ್ ತಾಲೂಕಿನ ರಾಣಿಲ್ ಗ್ರಾಮದ ಹದೀದ್ ಷಾ ಬಂಧಿತ ಆರೋಪಿ. ಈತ ಆವಿನಹಳ್ಳಿ ಹೋಬಳಿಯ ಕೋಳೂರು, ಗೆಣಸಿನಕುಣಿ, ಗಿಣಿವಾರ, ಕೌತಿ, ಹುಲಿದೇವರಬನ, ಅಂಬಾರಗೋಡ್ಲು ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡುತ್ತಿದ್ದ. ಅಲ್ಲದೆ, ಒಂಟಿ ಮನೆಗಳನ್ನು ಗುರುತಿಸಿ, ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ.

 

Viral video: ದಾವಣಗೆರೆ ಜನರಲ್ಲಿ ಭಯಭೀತಿಗೊಳಿಸಿದ ಒಂಟಿ ಮನೆ ದರೋಡೆ!

ಸೆ.10ರಂದು ಆರೋಪಿ ಹದೀದ್ ಷಾ ಅಂಬಾರಗೋಡ್ಲು ಗ್ರಾಮದ ಸುಜಾತ ಕೋಂ ಶೇಖರ್ ಶೆಟ್ಟಿ ಎಂಬವರ ಮನೆಗೆ ನುಗ್ಗಿ ಸಿಸಿ ಕ್ಯಾಮೆರಾ ಸಂಪರ್ಕವನ್ನು ಕಡಿತಗೊಳಿಸಿ, ಮಾರಾಣಾಂತಿಕ ಹಲ್ಲೆ ನಡೆಸಿದ್ದನು. ಆರೋಪಿ ಪತ್ತೆಗೆ ಇಳಿದ ಪೊಲೀಸರು ಹದೀದ್ ಷಾನನ್ನು ಬಂಧಿಸಿದ್ದಾರೆ. ಅಲ್ಲದೇ, ಹಲ್ಲೆ ಮಾಡಲು ಆತ ಬಳಸಿದ್ದ ಕಬ್ಬಿಣದ ರಾಡ್, ಸಿಸಿ ಕ್ಯಾಮರಾ ತಂತಿ ತುಂಡು ಮಾಡುವ ವಸ್ತು, ಮಾಸ್ಕ್, ಹ್ಯಾಂಡ್ ಗ್ಲೌಸ್ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಡಿವೈಎಸ್‌ಪಿ ಗೋಪಾಲಕೃಷ್ಣ ಟಿ. ನಾಯ್ಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಮಹಾಬಲೇಶ್ವರ ನಾಯ್ಕ್, ಸಬ್ ಇನ್‌ಸ್ಪೆಕ್ಟರ್ ನಾರಾಯಣ ಮಧುಗಿರಿ, ಸಿಬ್ಬಂದಿ ಸನಾವುಲ್ಲಾ, ಶ್ರೀಧರ್, ಸವಿತಾ, ಪ್ರವೀಣಕುಮಾರ್, ರವಿಕುಮಾರ್, ಗುರುಬಸವರಾಜ, ವಿಶ್ವನಾಥ್ ಮತ್ತು ಚಾಲಕ ಗಿರೀಶ್ ಬಾಬು ಪಾಲ್ಗೊಂಡಿದ್ದರು. 

ಮಾಜಿ ಸಂಸದ ಪತ್ನಿಯನ್ನೂ ಬಿಡದ ಕಳ್ಳರು! ನೀರು ಕೇಳೋ ನೆಪದಲ್ಲಿ ಸರ ಕಿತ್ತು ಪರಾರಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!