
ಹಾಸನ (ಮೇ.4): ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಸಂಸದರ ನಿವಾಸದಲ್ಲೇ ಅತ್ಯಾಚಾರ ನಡೆದಿರುವ ಬಗ್ಗೆ ದೂರು ಹಿನ್ನೆಲೆ ಸಂಸದರ ಹಾಸನ ನಿವಾಸದ ಗೇಟ್ ಗೆ ಬೀಗ ಹಾಕಲಾಗಿದೆ. ಸಾಕ್ಷಿ ನಾಶದ ಆತಂಕ ಹಿನ್ನೆಲೆ ಸಂಸದರ ನಿವಾಸದ ಗೇಟಿಗೆ ಬೀಗ ಹಾಕಲಾಗಿದೆ. ಸಂಸದರ ನಿವಾಸದಿಂದಲೇ ಬೆಂಗಳೂರಿಗೆ ತೆರಳಿ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದರು.
ಇನ್ನು ಪ್ರಕರಣ ಸಂಬಂಧ ಹೆಚ್ ಡಿ ರೇವಣ್ಣ ಅವರ ಹೊಳೆನರಸೀಪುರದ ಮನೆಗೆ ಇಬ್ಬರು ಸಂತ್ರಸ್ಥೆಯರನ್ನು ಎಸ್ ಐ ಟಿ ಕರೆ ತಂದಿದೆ. ಓರ್ವ ಸಂತ್ರಸ್ಥೆ ಹಾಸನದ ಎಂಪಿ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರ ಆರೋಪ ಮಾಡಿರುವ ಬಗ್ಗೆ ಸಿಐಡಿ ಬಳಿ ದೂರು ನೀಡಿರುವಾಕೆ, ಈಕೆ ಹೊಳೆನರಸೀಪುರ ಮನೆಯಲ್ಲೂ ಅತ್ಯಾಚಾರ ಆಗಿದ್ದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಮತ್ತೊಬ್ಬಾಕೆ ಹೊಳೆನರಸೀಪುರದ ಲೈಂಗಿಕ ಕಿರುಕುಳ ಪ್ರಕರಣ ಸಂತ್ರಸ್ತೆ ಇದರಲ್ಲಿ ಹೆಚ್ ಡಿ ರೇವಣ್ಣ ಎ1 ಆರೋಪಿ. ಎಸ್ಐಟಿ ಇಬ್ಬರಿಂದಲೂ ಸ್ಥಳ ಮಹಜರ್ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಬರೋಬ್ಬರಿ 700 ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ
ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು:
ಹೊಳೆನರಸೀಪುರಲ್ಲಿರುವ ರೇವಣ್ಣ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳ ಭೇಟಿ ಹಿನ್ನೆಲೆ ಸ್ಥಳೀಯ ಪೊಲೀಸರು ಅದಕ್ಕೂ ಮುಂಚೆ ರೇವಣ್ಣ ನಿವಾಸಕ್ಕೆ ಬಂದು ಮನೆಯಲ್ಲಿರುವ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ವಿಚಾರ ತಿಳಿಸಿದರು. 11.30ರ ಸುಮಾರಿಗೆ ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ಸಂತ್ರಸ್ತೆಯರೊಂದಿಗೆ ಆಗಮಿಸಿ ಸ್ಥಳ ಮಹಜರು ನಡೆಸಿತು.
ರೇವಣ್ಣ ನಿವಾಸದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥೆ ನೀಡಿದ್ದ ದೂರಿನ ಹಿನ್ನೆಲೆ ಅವರ ಮನೆಯಲ್ಲಿಯೇ ಸ್ಥಳ ಮಹಜರು ನಡೆಸಿತು.
ಪ್ರಜ್ವಲ್ ರೇವಣ್ಣ ವಿರುದ್ದ ಜಾರಿಯಾಗುತ್ತಾ ರೆಡ್ ಕಾರ್ನರ್ ನೊಟೀಸ್?
ಇದಕ್ಕೂ ಮುನ್ನ ಸ್ಥಳ ಮಹಜರು ನಡೆಸಲು ಬೇಕಾದ ಅಗತ್ಯ ವಸ್ತುಗಳು, ಸಿಪಿಯು, ಮಾನೀಟರ್, ಪ್ರಿಂಟರ್ ಅನ್ನು ಹೊಳೆನರಸೀಪುರ ಪೊಲೀಸರು ರೇವಣ್ಣ ನಿವಾಸಕ್ಕೆ ತೆಗೆದುಕೊಂಡು ಬಂದರು. ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ಥ ಮಹಿಳೆಯ ಹೇಳಿಕೆ ದಾಖಲಿಸಿದ್ದು, ಮಾಜಿ ಸಚಿವ ರೇವಣ್ಣ ಪರವಾದ ವಕೀಲರು ಹಾಗೂ ಕೆಲ ಜೆಡಿಎಸ್ ಮುಖಂಡರು ಸ್ಥಳದಲ್ಲಿ ಹಾಜರಿದ್ದರು. ಭವಾನಿ ರೇವಣ್ಣ ಮನೆಯೊಳಗೆ ಇದ್ದರು.
ಇನ್ನು ಸಂತ್ರಸ್ಥೆಯನ್ನು ತನಿಖಾ ತಂಡ ಮನೆಯೊಳಗೆ ಕರೆದೊಯ್ದ ಅಡುಗೆ ಮನೆ, ಬೆಡ್ ರೂಂ ಹಾಗು ಸ್ಟೋರ್ ರೂಂ ನಲ್ಲಿ ಮಹಜರು ನಡೆಸಿ ಹೇಳಿಕೆ ದಾಖಲಿಸಿತು. ಯಾಕೆಂದರೆ ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದ ಬಗ್ಗೆ ಸಂತ್ರಸ್ಥೆ ಆರೋಪಿಸಿದ್ದಳು.
ಪ್ರಜ್ವಲ್ ಎಂಪಿ ನಿವಾಸ ಹಾಸನದಲ್ಲಿ ಸ್ಥಳಮಹಜರು:
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಹಿನ್ನೆಲೆ, ಹಾಸನದ RC ರಸ್ತೆಯಲ್ಲಿರುವ ಪ್ರಜ್ವಲ್ ನಿವಾಸಕ್ಕೆ SIT ಆಗಮಿಸಿ ಸ್ಥಳ ಮಹಜರು ನಡೆಸಲಿದೆ. ಈ ಹಿನ್ನೆಲೆ ಸ್ಥಳೀಯ ಡಿ.ಆರ್.ಪೊಲೀಸರು ಆಗಮಿಸಿ ನಿವಾಸಕ್ಕೆ ಭದ್ರತೆ ನೀಡಿದೆ. ಸಂಸದರ ನಿವಾಸದಲ್ಲೇ ಅತ್ಯಾಚಾರ ಆರೋಪ ಹಿನ್ನೆಲೆ ಸಂತ್ರಸ್ಥೆಯನ್ನು ಕರೆತಂದು ಸ್ಥಳ ಮಹಜರು ನಡೆಸಲಿದ್ದಾರೆ.
ಅದಕ್ಕೂ ಮುನ್ನ ಸಂಸದರ ನಿವಾಸದ ಕೀಯನ್ನು ಪ್ರಜ್ವಲ್ ಪಿಎ ಕೈಯಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸದ ಕೀ ವಶಕ್ಕೆ ಪಡೆದು ಸಾಕ್ಷಿ ನಾಶವಾಗದಂತೆ ಎಚ್ಚರ ವಹಿಸಿದ್ದರು. ಈ ಪ್ರಕರಣ ಸಿಐಡಿ ಬಳಿ ದಾಖಲಾಗಿದೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿರುವ ದೂರಾಗಿದೆ. ಪ್ರಜ್ವಲ್ ಈ ಪ್ರಕರಣ ಎ1 ಆರೋಪಿಯಾಗಿದ್ದು, ಮಧ್ಯಾಹ್ನ ಇಲ್ಲಿ ಸ್ಥಳ ಮಹಜರು ನಡೆಯಲಿದೆ. ಇದೇ ನಿವಾಸದಿಂದ ಪ್ರಜ್ವಲ್ ಬೆಂಗಳೂರಿಗೆ ಬಂದು ಅಲ್ಲಿಂದ ರಾಜತಾಂತ್ರಿಕ ಪಾಸ್ ಪೋರ್ಟ್ ಮೂಲಕ ವಿದೇಶಕ್ಕೆ ತೆರಳಿದ್ದಾರೆ. ಈಗಾಗಲೇ ಅವರ ಬಂಧನಕ್ಕೆ ಲುಕ್ ಔಟ್ ನೋಟೀಸ್ ಜಾರಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ