
ಬೆಂಗಳೂರು(ಮಾ. 14) ಸಿಡಿ ಸ್ಫೋಟವಾದ ನಂತರ ರಮೇಶ್ ಜಾರಕಿಹೊಳಿಯವರ ಪತ್ರದ ಆಧಾರದ ಮೇಲೆ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು. ತನಿಖಾ ತಂಡ ಒಟ್ಟು ಐವರನ್ನು ವಶಕ್ಕೆ ಪಡೆದಿದೆ ಎಂದು ವರದಿಗಳಾಗಿದ್ದವು. ಆದರೆ ಈಗ ಅಲ್ಲಿಂದಲೇ ಸ್ಪಷ್ಟನೆ ಸಿಕ್ಕಿದೆ.
ಇಲ್ಲಿವರೆಗೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ನಾಪತ್ತೆಯಾಗಿರುವ ಮೂವರ ಹುಡುಕಾಟ ಮುಂದುವರಿದಿದೆ ಎಂದು ಎಸ್ ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಎಸ್ಐಟಿ ಸಭೆ ನಡೆಸಿದೆ. ಕಿಂಗ್ ಪಿನ್ ಗಳು ಕೃತ್ಯ ಇದೇ ಮೊದಲೇನಲ್ಲ ಎಂದಿರುವ ಎಸ್ಐಟಿ ಮಾಸ್ಟರ್ ಮೈಂಡ್ ಗಳ ಹಿಸ್ಟರಿ ಕಲೆಕ್ಟ್ ಮಾಡಿಕೊಂಡಿದೆ. ಈಮೇಲ್ ಮೂಲಕ ಯುವತಿ, ಸ್ನೇಹಿತ, ಕಿಂಗ್ ಪಿನ್ ಗೆ ನೋಟಿಸ್ ಕಳುಹಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ನನಗೇನೂ ಗೊತ್ತಿಲ್ಲ; ವಿಡಿಯೋದಲ್ಲಿ ಯುವತಿ ಹೇಳಿದ ಸಂಗತಿ
ಹೆಚ್ಚುವರಿಯಾಗಿ ಇಬ್ಬರು ಇನ್ಸ್ಪೆಕ್ಟರ್ ಗಳನ್ನು ಎಸ್ಐಟಿ ಟೀಂ ಕರೆಸಿಕೊಂಡಿದೆ. ಸಿಸಿಬಿಯಲ್ಲಿದ್ದ ಇಬ್ಬರು ಇನ್ಸ್ಪೆಕ್ಟರ್ ಗಳು ಎಸ್ಐಟಿ ಸೇರಿಕೊಂಡಿದ್ದಾರೆ. ಇನ್ಸ್ಪೆಕ್ಟರ್ ಮಾಲ್ತೇಶ್ ಬೋಳೆತ್ತೀನ್ ಹಾಗೂ ಶ್ರೀಧರ್ ಪೂಜಾರ್ ರ್ ನೇಮಕ ಎಸ್ಐಟಿ ತಂಡದಲ್ಲಿ ಕೆಲಸ ಮಾಡಲಿದ್ದಾರೆ.
ಸಿಡಿ ಬಿಡುಗಡೆಯಾದನಂತರ ರಮೇಶ್ ಜಾರಕಿಹೊಳಿ ತಮ್ಮ ಮೇಲೆ ಷಡ್ಯಂತ್ರ ನಡೆಸಲಾಗಿದೆ ಎಂದು ಹೇಳಿದ್ದರು. ರಮೇಶ್ ಜಾರಕಿಹೊಳಿ ದೂರು ದಾಖಲಿಸಿದ ನಂತರ ಪ್ರತ್ಯಕ್ಷಳಾಗಿದ್ದ ಯುವತಿ ವಿಡಿಯೋ ಒಂದನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟು ತನಗೆ ಅನ್ಯಾಯವಾಗಿದೆ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ