
ಬೆಂಗಳೂರು (ಸೆ.8) : ವಿದೇಶದಿಂದ ವನ್ಯಜೀವಿಗಳನ್ನು ಕಳ್ಳಸಾಗಣೆ ಮಾಡಿದ ಆರೋಪದಡಿ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ಯಾಂಕಾಕ್ನಿಂದ ಬುಧವಾರ ರಾತ್ರಿ ಕೆಐಎ ವಿಮಾನ ನಿಲ್ದಾಣ(KIA airport bengaluru)ಕ್ಕೆ ಬಂದು ಏರ್ ಏಷ್ಯಾ ವಿಮಾನದಲ್ಲಿ ಟ್ರಾಲಿ ಬ್ಯಾಗ್ನಲ್ಲಿ ತರಲಾಗಿದ್ದ ವಿವಿಧ ಬಣ್ಣದ 55 ಹೆಬ್ಬಾವು ಮರಿಗಳು, ಕಾಳಿಂಗ ಸರ್ಪದ 17 ಮರಿಗಳು ಹಾಗೂ 6 ಅಪರೂಪದ ಕೋತಿಮರಿಗಳು ಸೇರಿದಂತೆ ಒಟ್ಟು 78 ವನ್ಯಜೀವಿಗಳು ಪತ್ತೆಯಾಗಿವೆ. ಈ ಪೈಕಿ 72 ವನ್ಯಜೀವಿಗಳು ಜೀವಂತವಾಗಿದ್ದು, 6 ಕೋತಿಮರಿಗಳು ಸಾವನಪ್ಪಿವೆ.
ಜೀವಂತ ವನ್ಯಜೀವಿ(wildife)ಗಳನ್ನು ಮೂಲ ದೇಶಕ್ಕೆ ವಾಪಾಸ್ ಕಳುಹಿಸಲಾಗಿದೆ. ಮೃತ ವನ್ಯಜೀವಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಮಾವು ರಫ್ತಿನಲ್ಲಿ ದಾಖಲೆ ಬರೆದ ಕೆಂಪೇಗೌಡ ವಿಮಾನ ನಿಲ್ದಾಣ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ