ಪ್ರಾಡಕ್ಟ್ ಕೊರಿಯರ್‌ ಹೆಸರಲ್ಲಿ ಟೆಕ್ಕಿಗೆ ವಂಚನೆ, ನಿಮಗೂ ಕಾಲ್ ಮಾಡಬಹುದು ಖದೀಮರು!

Published : Apr 16, 2024, 01:03 PM ISTUpdated : Apr 16, 2024, 01:07 PM IST
ಪ್ರಾಡಕ್ಟ್ ಕೊರಿಯರ್‌ ಹೆಸರಲ್ಲಿ ಟೆಕ್ಕಿಗೆ ವಂಚನೆ, ನಿಮಗೂ ಕಾಲ್ ಮಾಡಬಹುದು ಖದೀಮರು!

ಸಾರಾಂಶ

 ಸೈಬರ್‌ ವಂಚಕರು ಫೆಡಕ್ಸ್‌ ಕೊರಿಯರ್‌ ಹೆಸರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಬ್ಯಾಂಕ್‌ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗುತ್ತಿರುವುದಾಗಿ ಹೆದರಿಸಿ ಅವರ ಬ್ಯಾಂಕ್‌ ಖಾತೆಯ ಮಾಹಿತಿ ಪಡೆದು ₹1.97 ಲಕ್ಷವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಆರೋಪದಡಿ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು :  ಸೈಬರ್‌ ವಂಚಕರು ಫೆಡಕ್ಸ್‌ ಕೊರಿಯರ್‌ ಹೆಸರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಬ್ಯಾಂಕ್‌ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗುತ್ತಿರುವುದಾಗಿ ಹೆದರಿಸಿ ಅವರ ಬ್ಯಾಂಕ್‌ ಖಾತೆಯ ಮಾಹಿತಿ ಪಡೆದು ₹1.97 ಲಕ್ಷವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಆರೋಪದಡಿ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಡ್ಲು ಮುಖ್ಯರಸ್ತೆಯ ವಿನಾಯಕನಗರ ನಿವಾಸಿ ಆಕಾಶ್‌ ರಾಜ್‌(32) ವಂಚನೆಗೆ ಒಳಗಾದವರು. ಏ.10ರಂದು ಅಪರಿಚಿತರು ಆಕಾಶ್‌ ರಾಜ್‌ಗೆ ಕರೆ ಮಾಡಿ ತಾವು ಫೆಡೆಕ್ಸ್‌ ಕೊರಿಯರ್‌ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾರೆ.

ಬೆಂಗಳೂರು: ಡ್ರಗ್ಸ್‌ ಹೆಸರಿನಲ್ಲಿ ವಕೀಲೆಯನ್ನು ಡಿಜಿಟಲ್‌ ಆರೆಸ್ಟ್‌ ಮಾಡಿ, ನಗ್ನಗೊಳಿಸಿ ಹಣ ಸುಲಿಗೆ..!

‘ನಿಮ್ಮ ಆಧಾರ್‌ ಸಂಖ್ಯೆ ಬಳಸಿ ಮುಂಬೈನಿಂದ ಇರಾನ್‌ಗೆ ಅಕ್ರಮವಾಗಿ 5 ಕೆ.ಜಿ.ಬಟ್ಟೆ, 1 ಲ್ಯಾಪ್‌ಟಾಪ್‌, ಪಾಸ್‌ಪೋರ್ಟ್‌, ಕ್ರೆಡಿಟ್‌ ಕಾರ್ಡ್‌, 50 ಶೀಟ್‌ ಎಲ್‌ಎಸ್‌ಡಿ ಮಾದಕ ಮಾತ್ರೆಗಳನ್ನು ಸಾಗಿಸಲಾಗುತ್ತಿದೆ. ಅಂತೆಯೇ ನಿಮ್ಮ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗುತ್ತಿದೆ’ ಎಂದು ಹೇಳಿ ಆಕಾಶ್‌ ರಾಜ್‌ ಅವರ ಬ್ಯಾಂಕ್‌ ಖಾತೆ ಮಾಹಿತಿ ಪಡೆದುಕೊಂಡಿದ್ದಾನೆ.

ಬಳಿಕ ಆಕಾಶ್‌ ರಾಜ್‌ಗೆ ತಿಳಿಯದಂತೆ ಅವರ ಐಸಿಐಸಿಐ ಖಾತೆಯಿಂದ ₹1.97 ಲಕ್ಷ ಲೋನ್‌ ಮಾಡಿಸಿ ಬಳಿಕ ಆ ಹಣವನ್ನು ಆಕಾಶ್‌ ರಾಜ್‌ ಅವರ ಕೊಟಾಕ್‌ ಮಹೀಂದ್ರ ಮತ್ತು ಇಂಡಸ್‌ ಬ್ಯಾಂಕ್‌ ಖಾತೆಗೆ ವರ್ಗಾಯಿಸಿಕೊಂಡು ಬಳಿಕ ತಮ್ಮ ಖಾತೆಗೆ ಆ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಲೋನ್‌ ಸಂಬಂಧ ಆಕಾಶ್‌ ರಾಜ್‌ ಮೊಬೈಲ್‌ಗೆ ಬ್ಯಾಂಕ್‌ನಿಂದ ಸಂದೇಶ ಬಂದ ಬಳಿಕ ತಾನು ಸೈಬರ್‌ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.

ಆನ್‌ಲೈನ್ ವಂಚನೆಗೆ 2 ಲಕ್ಷ ಕಳೆದುಕೊಂಡ ಬಾಲಕ ಆತ್ಮಹತ್ಯೆ; ಪೋಷಕರು ಮಾಡಬೇಕಾದ್ದೇನು?

ಬಳಿಕ ಆಕಾಶ್‌ ರಾಜ್‌ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ಬಂದು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೈಬರ್‌ ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!