
ಬೆಂಗಳೂರು(ಮೇ.23): ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಜಿಗಿದು ಟೆಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉತ್ತಮ್ ಹೆಗಡೆ (30) ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ವೇರ್ ಉದ್ಯೋಗಿ. ಅವಿವಾಹಿತರಾಗಿರುವ ಉತ್ತಮ್ ಹೆಗಡೆ ಬೆನ್ನಿಗಾನಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ಪೋಷಕರೊಂದಿಗೆ ವಾಸವಿದ್ದು, ನಗರದ ಪ್ರತಿಷ್ಠಿತ ಖಾಸಗಿ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ರಾತ್ರಿ ಎಂದಿನಂತೆ ಪೋಷಕರೊಂದಿಗೆ ಬೆರೆತು ಊಟ ಮಾಡಿ ನಿದ್ರೆಗೆ ಜಾರಿದ್ದರು.
ಬಿಲ್ಡಿಂಗ್ನಿಂದ ಹಾರಿ ಟೆಕ್ಕಿ ಉತ್ತಮ್ ಹೆಗಡೆ ಆತ್ಮಹತ್ಯೆ, ಕಾರಣ ನಿಗೂಢ
ಗುರುವಾರ ನಸುಕಿನ ವೇಳೆ ಮೂರು ಗಂಟೆ ಸಮಯದಲ್ಲಿ ಅಪಾರ್ಟ್ಮೆಂಟ್ನ ಬಾಲ್ಕನಿಗೆ ಬಂದಿದ್ದ ಉತ್ತಮ್ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಉತ್ತಮ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಡೆತ್ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ