
ಕಾರವಾರ(ಡಿ.16): ಜಿಲ್ಲೆಯ ವಿವಿಧ ಕಡೆ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ್ದ ಪಿಎಸ್ಐ ಕುಸುಮಾಧರ ಅವರ ಹೆಸರಿನಲ್ಲಿ ವಂಚಕರು ಹಣ ಕೇಳಲು ಆರಂಭಿಸಿದ್ದಾರೆ.
ಮಂಗಳವಾರ ಹಲವಾರು ಜನರಿಗೆ ಕುಸುಮಾಧರ ಅವರ ಹೆಸರಿನ ನಕಲಿ ಫೇಸ್ಬುಕ್ ಖಾತೆಯಿಂದ ರಿಕ್ವೆಸ್ಟ್ ಹೋಗಿದ್ದು, ಸಣ್ಣ ಸಹಾಯ ಮಾಡಿ ಎನ್ನುವ ಸಂದೇಶ ಕಳಿಸಿದ್ದಾರೆ. ಏನು ಸಹಾಯ ಎಂದು ಕೇಳಿದಾಗ ಹಣ ನೀಡುವಂತೆ ಕೋರಿದ್ದು, ನಾಳೆ ವಾಪಸ್ ನೀಡುತ್ತೇನೆ ಎಂದಿದ್ದಾರೆ. ಕುಸುಮಾಧರ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯ ಪೊಲೀಸರು ನಕಲಿ ಖಾತೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೆಲಸದ ಆಸೆ ತೋರಿಸಿ ಯುವಕನಿಗೆ ಪಂಗನಾಮ ಹಾಕಿದ ಖದೀಮರು
ಈ ಹಿಂದೆ ಭಟ್ಕಳ ಎಎಸ್ಪಿ ನಿಖಿಲ್ ಬುಳ್ಳಾವರ್, ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ರೇವಣಸಿದ್ದಪ್ಪ ಜೀರಂಕಲಗಿ ಒಳಗೊಂಡು ವಿವಿಧ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಫೇಸ್ಬುಕ್ ನಕಲಿ ಖಾತೆ ತೆರೆದು ಹಣ ಕೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ