
ಬೆಂಗಳೂರು(ಜೂ.14): ಹೆಂಡತಿಯನ್ನ ಮನೆಗೆ ಕಳಿಸದ ಹಿನ್ನೆಲೆಯಲ್ಲಿ ಅಳಿಯನೊಬ್ಬ ಅತ್ತೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ಇಂದು(ಬುಧವಾರ) ನಡೆದಿದೆ.
ಗೀತಾ ಎಂಬುವರೇ ಅಳಿಯನಿಂದಲೇ ಚಾಕು ಇರಿತಕ್ಕೊಳಾಗದವರಾಗಿದ್ದಾರೆ. ಮನೋಜ್ ಎಂಬಾತನೇ ಗೀತಾ ಅವರಿಗೆ ಚಾಕುವಿನಿಂದ ಆರೋಪಿಯಾಗಿದ್ದಾನೆ.
Karnataka crime : ದೇವರಮನೆಗುಡ್ಡದಲ್ಲಿ ಬಂಟ್ವಾಳ ಮೂಲದ ಯುವಕನ ಶವ ಪತ್ತೆ
ಆರೋಪಿ ಮನೋಜ್ ಮೂರು ವರ್ಷಗಳ ಹಿಂದೆ ವರ್ಷಿತಾ ಎಂಬಾಕೆಯನ್ನ ಪ್ರೀತಿಸಿ ಮದ್ವೆಯಾಗಿದ್ದನು. ಬಳಿಕ ಗಂಡ ಕೆಲಸ ಮಾಡ್ತಿಲ್ಲ ಅಂತ ವರ್ಷಿತಾ ತವರು ಮನೆ ಸೇರಿದ್ದಳಂತೆ.
ಈ ಹಿನ್ನೆಲೆಯಲ್ಲಿ ಪತ್ನಿಯನ್ನು ಮನೋಜ್ ಕರೆತರಲು ಹೋಗಿದ್ದ. ಈ ವೇಳೆ ಅತ್ತೆ ಮತ್ತು ಅಳಿಯನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಅತ್ತೆ ಗೀತಾಗೆ ಅಳಿಯ ಮನೋಜ್ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ