
ಬೈಲಹೊಂಗಲ(ಸೆ.08): ಮಗನೇ ತಂದೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಬೆಂಗಳೂರಿನ ಬಿಎಂಟಿಸಿ ಚಾಲಕನಾಗಿದ್ದ ರುದ್ರಪ್ಪ ತಳವಾರ (55) ಕೊಲೆಯಾದ ಅಪ್ಪ, ಸಂತೋಷ ತಳವಾರ(30) ಕೊಲೆ ಮಾಡಿದ ಮಗ.
ಘಟನೆ ವಿವರ:
ಬೆಂಗಳೂರಿನ ಬಿಎಂಟಿಸಿ ಚಾಲಕನಾಗಿದ್ದ ರುದ್ರಪ್ಪ ತಳವಾರ (55) ಹಾಗೂ ಪತ್ನಿ, ಮಲ್ಲೂರ ಗ್ರಾಮದ ಖಾಸಗಿ ಶಾಲೆ ಶಿಕ್ಷಕಿ ಮಹಾದೇವಿ (50) ಮಧ್ಯೆ ಜಗಳ ನಡೆದು ಮಹಾದೇವಿಗೆ ಬಲವಾಗಿ ಹೊಡೆದಿದ್ದರಿಂದ ಕಣ್ಣಿನ ಭಾಗದಲ್ಲಿ ಬಲವಾದ ಗಾಯವಾಗಿತ್ತು. ಮಗ ಸಂತೋಷ ಇಬ್ಬರ ಜಗಳ ಬಿಡಿಸಿ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದ್ದ. ತನ್ನ ಬಳಿಯ ಹಣದಲ್ಲಿ ಔಷಧೋಪಚಾರ ಮಾಡಿಸಿ, ಸ್ಕ್ಯಾನಿಂಗ್ಗಾಗಿ ಮನೆಗೆ ಹಣ ತರಲು ಬಂದಾಗ, ಕುಡಿದ ಅಮಲಿನಲ್ಲಿದ್ದ ತಂದೆ ಅವಳಿಗೆ ಚಿಕಿತ್ಸೆ ಕೊಡಿಸಬೇಡ ಎಂದು ಜಗಳವಾಡಿದಾಗ, ಮಾತಿಗೆ ಮಾತು ಬೆಳೆದು ಇಬ್ಬರು ಕೈ, ಕೈ ಮಿಲಾಯಿಸಿ ಜಗಳವಾಡಿದ್ದಾರೆ.
Dharwad: ಕುಡಗೊಲಿನಿಂದ ಅತ್ತಿಗೆಯ ಕತ್ತು ಸೀಳಿದ ಮೈದುನ..!
ಸಂತೋಷ ಸಿಟ್ಟಿನ ಭರದಲ್ಲಿ ಮಾರಕಾಸ್ತ್ರಗಳಿಂದ ತಂದೆ ರುದ್ರಪ್ಪನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷನನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಉಳವಪ್ಪ ಸಾತೆನಹಳ್ಳಿ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ