ಕೊಪ್ಪಳ: ಕುಟುಂಬ ಕಲ​ಹದಿಂದ ಹೆತ್ತ ತಂದೆ-ತಾಯಿಯನ್ನೇ ಕೊಲೆ​ಗೈದ ಪಾಪಿ ಪುತ್ರ..!

Kannadaprabha News   | Asianet News
Published : Jun 03, 2020, 07:49 AM ISTUpdated : Jun 03, 2020, 08:17 AM IST
ಕೊಪ್ಪಳ: ಕುಟುಂಬ ಕಲ​ಹದಿಂದ ಹೆತ್ತ ತಂದೆ-ತಾಯಿಯನ್ನೇ ಕೊಲೆ​ಗೈದ ಪಾಪಿ ಪುತ್ರ..!

ಸಾರಾಂಶ

ತಂದೆ-ತಾಯಿ ಕೊಲೆ ಮಾಡಿದ ಮಗ| ಕೊಪ್ಪಳ ಜಿಲ್ಲೆಯ ಕನ​ಕ​ಗಿ​ರಿ​ಯಲ್ಲಿ ಹೃದಯ ವಿದ್ರಾ​ವಕ ಘಟ​ನೆ|ದಂಪತಿ ಶವದ ಮುಂದೆ ಕಣ್ಣೀ​ರಿಟ್ಟ ಸಂಬಂಧಿ​ಕ​ರು| ಆರೋ​ಪಿ​ಯನ್ನು ನ್ಯಾಯಾಂಗ ಬಂಧ​ನಕ್ಕೆ ಒಪ್ಪಿ​ಸ​ಲಾ​ಗಿ​ದೆ|

ಕನಕಗಿರಿ(ಜೂ.03):  ಕುಟುಂಬ ಕಲಹ ಹಿನ್ನೆಲೆಯಲ್ಲಿ ಮಗನೇ ತಂದೆ-ತಾಯಿಯನ್ನು ಕೊಲೆ ಮಾಡಿರುವ ದಾರುಣ ಘಟನೆ ಪಟ್ಟಣದ 9ನೇ ವಾರ್ಡಿನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಅಕ್ಕಮ್ಮ (56), ಗಿರಿಯಪ್ಪ ಮಡಿವಾಳ (61) ಕೊಲೆಯಾದ ದಂಪತಿ. ಈ ದಂಪತಿಗಳಿಗೆ ಒಬ್ಬನೇ ಮಗ, ಒಬ್ಬಳೇ ಮಗಳು. ಮಗನಿಗೆ ನಾಲ್ಕು ವರ್ಷದ ಹಿಂದೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಪಿ.ಕೆ. ಹಳ್ಳಿಯ ತನುಜಾ ಜೊತೆ ವಿವಾಹವಾಗಿತ್ತು. ಕೌಟುಂಬಿಕ ಕಲಹದಿಂದಾಗಿ ರಮೇಶ ತನ್ನ ತಂದೆ-ತಾಯಿ ಮಲಗಿರುವಾಗ ತಲೆಗೆ ಕಬ್ಬಿಣದ ಹಾರೆಯಿಂದ ಹಲ್ಲೆ ನಡೆಸಿದ್ದಾನೆ. ಮೊದಲಿಗೆ ತಾಯಿ ಅಕ್ಕಮ್ಮ ಸ್ಥಳದಲ್ಲಿಯೇ ಪ್ರಾಣಬಿಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ತಂದೆ ಗಿರಿಯಪ್ಪ ಕೊಪ್ಪಳ ಜಿಲ್ಲಾಸ್ಪತ್ರೆಗೆ ತೆರಳುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಎಸ್‌ಪಿ ಜಿ. ಸಂಗೀತಾ ತಿಳಿಸಿದ್ದಾರೆ.

ಮಾಗಡಿ: ಆಸ್ತಿ ಆಸೆಗಾಗಿ ಪತ್ನಿಯನ್ನೇ ಕೊಂದ ಪತಿ..?

ಆರೋಪಿ ರಮೇಶ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಖಾಸಗಿ ಸಂಸ್ಥೆಯೊಂದರಲ್ಲಿ ಜವಾನ ಆಗಿ ಕೆಲಸ ಮಾಡುತ್ತಿದ್ದ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ತಮ್ಮ ಮನೆಗೆ ಬಂದಿದ್ದ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಪಾಲ​ಕ​ರೊ​ಡ​ನೆ ಜಗಳ ಮಾಡಿ, ಮಂಗಳವಾರ ಬೆಳಗಿನ ​ಜಾವ ಆರೋಪಿಯು ತಂದೆ-ತಾಯಿಯನ್ನು ಕೊಲೆಗೈದಿದ್ದಾನೆ.

ಸಿಪಿಐ ಸುರೇಶ ತಳವಾರ ನೇತೃತ್ವದ ತಂಡ ತನಿಖೆ ಆರಂಭಿಸಿದೆ. ಪ್ರಕರಣದ ಸತ್ಯಾಂಶ ತನಿಖೆಯ ಬಳಿಕ ಮತ್ತಷ್ಟುತಿಳಿಯಲಿದೆ. ಮಾನಸಿಕ ಅಸ್ವಸ್ಥತೆಯಿಂದ ರಮೇಶ ತನ್ನ ಪೋಷಕರನ್ನು ಕೊಲೆ ಮಾಡಿದ್ದಾನೆ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದರು. ದಂಪತಿ ಸಾವಿನ ಸುದ್ದಿ ತಿಳಿದ ಜನ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ, ದುಃಖತಪ್ತರಾಗಿ ಕಣ್ಣೀರಿಟ್ಟರು. ಕೊಲೆಯಾದ ದಂಪತಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪ್ರಕರಣ ಕನಕಗಿರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ಆರೋ​ಪಿ​ಯನ್ನು ನ್ಯಾಯಾಂಗ ಬಂಧ​ನಕ್ಕೆ ಒಪ್ಪಿ​ಸ​ಲಾ​ಗಿ​ದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!