ಕಲ್ಲಿನಿಂದ ಜಜ್ಜಿ ತಂದೆಯನ್ನು ಕೊಂದೇ ಬಿಟ್ಟ ಪಾಪಿ ಮಗ

Suvarna News   | Asianet News
Published : Jan 12, 2021, 02:34 PM IST
ಕಲ್ಲಿನಿಂದ ಜಜ್ಜಿ ತಂದೆಯನ್ನು ಕೊಂದೇ ಬಿಟ್ಟ ಪಾಪಿ ಮಗ

ಸಾರಾಂಶ

 ಕ್ಷುಲ್ಲಕ ಕಾರಣಕ್ಕೆ ಮಗನಿಂದಲೇ ತಂದೆಯ ಹತ್ಯೆ | ಅಪ್ಪ, ಮಗನ ನಡುವೆ ಪ್ರತಿನಿತ್ಯ ಜಗಳ

ಚಿಕ್ಕಮಗಳೂರು(ಜ.12): ಕ್ಷುಲ್ಲಕ ಕಾರಣಕ್ಕೆ ಮಗನಿಂದಲೇ ತಂದೆಯ ಹತ್ಯೆ ನಡೆದಿದೆ. ಕಲ್ಲಿನಿಂದ ಜಜ್ಜಿ ತಂದೆಯನ್ನು ಮಗನೇ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಾಚಗೊಂಡನಹಳ್ಳಿಯಲ್ಲಿ ನಡೆದಿದೆ.

ತಮ್ಮಣ್ಣ  (66) ಮೃತ ದುರ್ದೈವಿ. ಮಗ ಸತೀಶನಿಂದ ದುಷ್ಕೃತ್ಯ ನಡೆದಿದೆ. ಅಪ್ಪ, ಮಗನ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತು. ಈ ಬಾರಿ ಜಗಳ ವಿಕೋಪ ತಿರುಗಿ ಕೊಲೆಯಲ್ಲಿ ಕೊನೆಗೊಂಡಿದೆ.

ಸಂಗೊಳ್ಳಿ ರಾಯಣ್ಣ ಬಗ್ಗೆ ಅವಹೇಳನ ಮಾಡಿವದನ ವಿರುದ್ಧ ಕೇಸ್

ಟ್ರಾಕ್ಟರ್ ಸಾಲ ಕಟ್ಟದ ಹಿನ್ನೆಲೆ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದಿದ್ದು, ಬಂದಿದ್ದವರ ಬಗ್ಗೆ ತಂದೆ ಮಗನನ್ನು ಪ್ರಶ್ನಿಸಿದ್ದರು. ಇಬ್ಬರ ಸಂಭಾಷೆ, ವಾದ ವಿವಾದ ವಿಕೋಪದಕ್ಕೆ ತಿರುಗಿ ಜಗಳ ತಾರಕಕ್ಕೇರಿದೆ.

ಈ ಸಂದರ್ಭ ಪುತ್ರನೇ ಕಲ್ಲಿನಿಂದ ಜಜ್ಜಿ ಪ್ರಶ್ನೆ ಮಾಡಿದ ತಂದೆಯನ್ನು ಕೊಲೆ ಮಾಡಿದ್ದಾನೆ. ಸಖರಾಯಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಕಲಿ ಕ್ಯೂಆರ್​ ಕೋಡ್​ಗೆ ಬಲಿಯಾಗದಿರಿ ಎಚ್ಚರ! ಯಾಮಾರಿದ್ರೆ ಅಕೌಂಟ್​ ಖಾಲಿ: ನಕಲಿ ಗುರುತಿಸುವುದು ಹೇಗೆ?
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು