ಉಡುಪಿ; ಮಗನಿಗೆ ಕೊರೋನಾ ಸೋಂಕು, ತಂದೆ ಆತ್ಮಹತ್ಯೆ

Published : Aug 27, 2020, 10:19 PM IST
ಉಡುಪಿ; ಮಗನಿಗೆ ಕೊರೋನಾ ಸೋಂಕು, ತಂದೆ ಆತ್ಮಹತ್ಯೆ

ಸಾರಾಂಶ

ಹಿರಿಯ ಮಗನಿಗೆ ಕೊರೋನಾ ಸೋಂಕು ಎಂಬ ಸುದ್ದಿ ಕೇಳಿ ತಂದೆ ಆತ್ಮಹತ್ಯೆ/ ಉಡುಪಿ ಜಿಲ್ಲೆಯಲ್ಲಿ ಘಟನೆ/ ಆಸ್ಪತ್ರೆಗೆ ಸೇರಿದ್ದ ಮಗನಿಗೆ ಕೊರೋನಾ ದೃಢವಾಗಿತ್ತು

ಉಡುಪಿ/  ಶಿರ್ವ (ಆ.  27)  ಮಗನಿಗೆ ಕೊರೋನಾ ಸೋಂಕಿರುವುದನನ್ನು ಕೇಳಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಳತ್ತೂರು ಗ್ರಾಮದ ಪುಂಚಲಕಾಡು ಎಂಬಲ್ಲಿ ನಡೆದಿದೆ.

ಸುಂದರ ಮೂಲ್ಯ (60)  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಂದರ ಅವರು  ರಕ್ತದೊತ್ತಡ, ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ದೊಡ್ಡ ಮಗನಿಗೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆ ಇದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಅವರಿಗೆ ಕೊರೋನಾ ಸೊಂಕು ದೃಡಪಟ್ಟಿತ್ತು.

ಕೊರೋನಾಕ್ಕೆ ಯುವಕರೆ ಟಾರ್ಗೆಟ್; ಯಾಕೆ ಹೀಗೆ?

ಇದನ್ನು ಕೇಳಿ ಸುಂದರ ಮೂಲ್ಯ ಅವರು ಜಿಗುಪ್ಸೆಗೊಂಡು ಮಂಗಳವಾರ ರಾತ್ರಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಉಡುಪಿ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ 11:30 ಗಂಟೆಗೆ ಮೃತಪಟ್ಟಿದ್ದಾರೆ. ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು