ಬೆಂಗಳೂರು: ಬೈದಳೆಂದು ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ!

Published : Feb 02, 2024, 11:08 AM ISTUpdated : Feb 02, 2024, 02:09 PM IST
ಬೆಂಗಳೂರು: ಬೈದಳೆಂದು ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ!

ಸಾರಾಂಶ

ಊಟ ಬಡಿಸಲು ಹೇಳಿದ್ದಕ್ಕೆ ಬೈದಳೆಂದು ಮಗನೊಬ್ಬ ಹೆತ್ತ ತಾಯಿಯನ್ನೇ ರಾಡ್‌ನಿಂದ ಹೊಡೆದುಕೊಂದು ಠಾಣೆಗೆ ಬಂದು ಶರಣಾದ ಘಟನೆ ಬೆಂಗಳೂರಿನ ಕೆಆರ್‌ ಪುರಂನಲ್ಲಿ ನಡೆದಿದೆ.

ಬೆಂಗಳೂರು (ಫೆ.2): ಊಟ ಬಡಿಸಲು ಹೇಳಿದ್ದಕ್ಕೆ ಬೈದಳೆಂದು ಮಗನೊಬ್ಬ ಹೆತ್ತ ತಾಯಿಯನ್ನೇ ರಾಡ್‌ನಿಂದ ಹೊಡೆದುಕೊಂದು ಠಾಣೆಗೆ ಬಂದು ಶರಣಾದ ಘಟನೆ ಬೆಂಗಳೂರಿನ ಕೆಆರ್‌ ಪುರಂನಲ್ಲಿ ನಡೆದಿದೆ.

ನೇತ್ರಾ ಮೃತ ದುರ್ದೈವಿ, ಮಗ ಪವನ್ ಕೊಲೆ ಮಾಡಿರೋ ಆರೋಪಿ. ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿರುವ ಮಗ ಪವನ್. ಇಂದು ಬೆಳಗ್ಗೆ 7.15ರ ಸುಮಾರಿಗೆ ನಡೆದಿರೋ ಘಟನೆ.

ಸರ್ಕಾರಿ ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ; ಬಗೆದಷ್ಟು ಬಯಲಾಗ್ತಿದೆ ಕಾಂಗ್ರೆಸ್ ನಾಯಕಿ ಕರ್ಮಕಾಂಡ!

ನನ್ನ ಮಗನೇ ಅಲ್ಲ ಎಂದಿದ್ದ ತಾಯಿ:

ಬೆಳಗ್ಗೆ ಕಾಲೇಜಿಗೆ ಹೋಗಲು ರೆಡಿಯಾಗಿದ್ದ ಪವನ್. ತಾಯಿಗೆ ಊಟ ಬಡಿಸುವಂತೆ ಹೇಳಿದ್ದಾನೆ. ಆದರೆ ತಾಯಿ ಆಗ ಬೇರೆ ಕೆಲಸದಲ್ಲಿ ನಿರತಳಾಗಿದ್ದು ಕೋಪದಲ್ಲಿ ಬೈದಿದ್ದ ತಾಯಿ ನೇತ್ರಾ. ನೀನು ನನ್ನ ಮಗನೇ ಅಲ್ಲ, ನಿನಗೆ ಊಟ ಹಾಕಲ್ಲ ಎಂದು ಬೈದಿದ್ದಳಂತೆ ತಾಯಿ. ಅಷ್ಟಕ್ಕೇ ಕೋಪಗೊಂಡ ಮಗ. ರಾಡ್‌ನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಈ ದಾಳಿ ನಿರೀಕ್ಷಸದ ತಾಯಿ ನೇತ್ರಾ. ರಾಡ್‌ನಿಂದ ಬಲವಾಗಿ ಹೊಡೆದಿದ್ದಕ್ಕೆ ತೀವ್ರ ರಕ್ತಸ್ರಾವವಾಗಿ ಸಾವಿಗೀಡಾಗಿದ್ದಾಳೆ.

ಪೂಜೆ ಮಾಡುವ ನೆಪದಲ್ಲಿ ಮಹಿಳೆಯ ಚಿನ್ನ ಎಗರಿಸಿಕೊಂಡು ಹೋದ ಬುಡುಬುಡಿಕೆಯವರು!

ನಿನ್ನೆ ರಾತ್ರಿಯೂ ತಾಯಿಯೊಂದಿಗೆ ಜಗಳ ಮಾಡಿದ್ದ ಮಗ:

ಕಳೆದ 30 ವರ್ಷದಿಂದ ಭೀಮಯ್ಯ ಲೇಔಟ್ ನಲ್ಲಿ ವಾಸವಿದ್ದ ಮೃತಳ ಕುಟುಂಬ ನಿನ್ನೆ ಸಂಜೆ ಮುಳಬಾಗಿಲಿನಿಂದ ಕೆಆರ್ ಪುರಂ ಗೆ ಬಂದಿದ್ದ ಮಗ. ರಾತ್ರಿ ತಾಯಿಯೊಡನೆ ಜಗಳ ಮಾಡಿ ಊಟ ಮಾಡದೇ ಮಲಗಿದ್ದ ಮಗ. ಇಂದು ಬೆಳಗ್ಗೆ ಮತ್ತೆ ಮುಳಬಾಗಿಲಿನ ಕಾಲೇಜಿಗೆ ತೆರಳಲು ರೆಡಿ ಆಗಿದ್ದ. ಬೆಳಗ್ಗೆ 7.30 ಸುಮಾರಿಗೆ ತಿಂಡಿ ಮಾಡದೇ ಮಲಗಿದ್ದ ತಾಯಿ. ಈ ವೇಳೆ ಮೊದಲೇ ಹೇಳಿದ್ರೂ ಯಾಕೆ ತಿಂಡಿ ಮಾಡಿಲ್ಲ ಎಂದು ಮಗ ಜಗಳ ಮಾಡಿದ್ದಾನೆ. ಈ ವೇಳೆ ಕೋಪಿಸಿಕೊಂಡಿರೋ ತಾಯಿ ಅಡುಗೆ ಮಾಡಲ್ಲ, ನೀನು ನನ್ನ ಮಗನೇ ಅಲ್ಲ ಎಂದು ಬೈದಿದ್ದಾಳೆ. ಹೀಗೆ ಮಾತಿಗೆ ಮಾತು ಬೆಳೆದು ಮನೆಯಲ್ಲಿದ್ದ ಕಬ್ಬಿಣದ ರಾಡಿನಿಂದ ತಾಯಿಯ ತಲೆಗೆ ಹೊಡೆದಿದ್ದಾನೆ. ತಲೆಗೆ ಗಂಭೀರ ಗಾಯದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರೋ ತಾಯಿ ನೇತ್ರಾವತಿ.

ಕೊಲೆ ಮಾಡಿದ ಬಳಿಕ ಠಾಣೆಗೆ ಕರೆ ಮಾಡಿದ್ದ ಮಗ. ಕೂಡಲೇ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿರೋ ಪೊಲೀಸರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?