ಚೆಕ್‌ಪೋಸ್ಟ್‌ನಲ್ಲಿ ವಾಹನ ಬಿಡಲು ಲಂಚ: ವೇಷ ಮರೆಸಿ ಹಿಡಿದ ರವಿ ಡಿ. ಚನ್ನಣ್ಣನವರ್!

Published : Apr 04, 2020, 08:15 AM ISTUpdated : Apr 04, 2020, 08:20 AM IST
ಚೆಕ್‌ಪೋಸ್ಟ್‌ನಲ್ಲಿ ವಾಹನ ಬಿಡಲು ಲಂಚ: ವೇಷ ಮರೆಸಿ ಹಿಡಿದ ರವಿ ಡಿ. ಚನ್ನಣ್ಣನವರ್!

ಸಾರಾಂಶ

ಚೆಕ್‌ಪೋಸ್ಟ್‌ನಲ್ಲಿ ವಾಹನ ಬಿಡಲು ಲಂಚ: ವೇಷ ಮರೆಸಿ ಹಿಡಿದ ಎಸ್ಪಿ!| ಸಾರಿಗೆ ಇಬ್ಬರು ಅಧಿಕಾರಿಗಳ ಅಮಾನತು| ಹೋಂ ಗಾರ್ಡ್‌ ಸೆರೆ, ಅತ್ತಿಬೆಲೆ ಗಡಿಯಲ್ಲಿ ಘಟನೆ

ಆನೇಕಲ್‌(ಏ.04): ಹಣ್ಣು ಮತ್ತು ತರಕಾರಿಗಳನ್ನು ಮಾರುಕಟ್ಟೆಗೆ ಸಾಗಿಸುತ್ತಿದ್ದ ವಾಹನಗಳನ್ನು ತಡೆಗಟ್ಟಿರೈತರಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರ್‌ಟಿಒ ಅಧಿಕಾರಿಗಳು, ಇವರಿಗೆ ಸಹಾಯಕನಾಗಿದ್ದ ಮಾಜಿ ಹೋಂಗಾರ್ಡ್‌ವೊಬ್ಬನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ವೇಷಮರೆಸಿಕೊಂಡು ಹಿಡಿದಿದ್ದಾರೆ.

ರಾಜ್ಯದ ಗಡಿ ಭಾಗವಾದ ಆನೇಕಲ್‌ ತಾಲೂಕಿನ ಅತ್ತಿಬೆಲೆ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ರಾತ್ರಿ ಎಸ್ಪಿ ಕಾರಾರ‍ಯಚರಣೆ ನಡೆಸಿದ್ದಾರೆ. ಈ ವೇಳೆ ಲಂಚ ಸ್ವೀಕರಿಸಿದ್ದ .15 ಸಾವಿರ ನಗದನ್ನು ವಶ ಪಡಿಸಿಕೊಳ್ಳಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆರ್‌ಟಿಒ ಬ್ರೇಕ್‌ ಇನ್‌ಸ್ಪೆಕ್ಟರ್‌ (ಸಾರಿಗೆ ತಪಾಸಣಾ ನಿರೀಕ್ಷಕರು)ಗಳಾದ ಟಿ.ಕೆ.ಜಯಣ್ಣ ಮತ್ತು ಕರಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಇವರಿಗೆ ಸಹಾಯಕನಾಗಿದ್ದ ಮಾಜಿ ಹೋಂ ಗಾರ್ಡ್‌ ವಿವೇಕ್‌ನನ್ನು ಬಂಧಿಸಲಾಗಿದೆ.

ಅತ್ತಿಬೆಲೆ ಚೆಕ್‌ಪೋಸ್ಟ್‌ನಿಂದ ಹಾದು ಹೋಗುವ ಹಣ್ಣು ಮತ್ತು ತರಕಾರಿ ಸಾಗಾಣೆ ವಾಹನಗಳಿಂದ ಬಲವಂತವಾಗಿ ಹಣ ಪಡೆಯುತ್ತಿದ್ದರು. ಈ ಸಂಬಂಧ ಅತ್ತಿಬೆಲೆಯ ರೈತ ಸಂಘದ ಸದಸ್ಯರು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಶಿವಮೂರ್ತಿ ಅವರಿಗೆ ದೂರು ನೀಡಿದ್ದರು. ತಕ್ಷಣವೇ ಕ್ರಮಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್‌ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದರು.

ಗುರುವಾರ ರಾತ್ರಿ ಗೂಡ್ಸ್‌ ಗಾಡಿಯಲ್ಲಿ ತಲೆಗೆ ಟವೆಲ್‌, ಮುಖಕ್ಕೆ ಮಾಸ್ಕ್‌ ಧರಿಸಿ ತೆರಳಿದ ಎಸ್ಪಿ ಅವರ ಬಳಿ ಮಾಜಿ ಹೋಮ್‌ಗಾರ್ಡ್‌ ವಿವೇಕ್‌ ಲಂಚ ಕೇಳಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ಪಡೆದು ಲಂಚ ಯಾರಿಗೆಲ್ಲ ಸಂದಾಯ ಆಗುತ್ತದೆ ಎನ್ನುವ ಬಗ್ಗೆ ಮಾಹಿತಿ ಕೇಳಿದಾಗ ಆರ್‌ಟಿಒ ಅಧಿಕಾರಿಗಳ ಹೆಸರನ್ನು ವಿವೇಕ್‌ ಹೇಳಿದ್ದಾನೆ. ಅಧಿಕಾರಿಗಳನ್ನು ಎಸ್ಪಿ ತಪಾಸಣೆ ನಡೆಸಿದಾಗ 15 ಸಾವಿರ ಲಂಚದ ಹಣ ಸಿಕ್ಕಿದೆ. ವಿವೇಕ್‌ನನ್ನು ಬಂಧಿಸಲಾಗಿದೆ. ಆರ್‌ಟಿಒ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರೂ ಅಧಿಕಾರಿಗಳ ವಿರುದ್ಧ ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ