
ಬೆಂಗಳೂರು(ಜ. 07) ಕಾವೇರಿ ಕಾಲಿಂಗ್ ಯೋಜನೆಗೆ ಹಣ ಸಂಗ್ರಹ ವಿಚಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಒಳಪಟ್ಟಿದೆ.
ಆಧ್ಯಾತ್ಮಿಕ ಚಟುವಟಿಕೆ ನಡೆಸಿದಾಕ್ಷಣ ಕಾನೂನಿಗೆ ಅತೀತರಲ್ಲ. ಹಣ ನೀಡಲು ಒತ್ತಾಯಿಸುತ್ತಿಲ್ಲವೆಂದು ಸ್ಪಷ್ಟನೆ ನೀಡಿ. ಹಣ ಸಂಗ್ರಹದ ಬಗ್ಗೆ ವಿವರಣೆ ನೀಡಲು ಈಶ ಫೌಂಡೇಷನ್ ಗೆ ಹೈಕೋರ್ಟ್ ಸೂಚನೆ ನೀಡಿದೆ.
ಸರ್ಕಾರದ ಹೆಸರಲ್ಲಿ ಹಣ ಸಂಗ್ರಹವೆಂದು ಆರೋಪವಿದೆ. ಸರ್ಕಾರ ಈ ಬಗ್ಗೆ ವಿಚಾರಣೆ ಏಕೆ ನಡೆಸಿಲ್ಲ? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ.
ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದೇವೆ. ಈವರೆಗೆ ಯಾರೂ ದೂರು ಸಲ್ಲಿಸಿಲ್ಲವೆಂದು ಸರ್ಕಾರದ ಸ್ಪಷ್ಟನೆ. ಸಮರ್ಪಕ ಆಕ್ಷೇಪಣೆ ಸಲ್ಲಿಸಲು ಈಶ ಫೌಂಡೇಶನ್ ಕಾಲಾವಕಾಶ ಕೋರಿದೆ.
ವಿಚಾರಣೆ ಎರಡು ವಾರ ಹೈಕೋರ್ಟ್ ಮುಂದಕ್ಕೆ ಹಾಕಿದೆ. ಈಶ ಫೌಂಡೇಷನ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ ಕಾವೇರಿ ಕೂಗು ಅಭಿಯಾನದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ನಿಮಗೆ ಅಧಿಕಾರ ಯಾರು ಕೊಟ್ಟವರು ಎಂದು ಪ್ರಶ್ನೆ ಮಾಡಿದೆ.
ಆಧ್ಯಾತ್ಮಿಕ ಚಟುವಟಿಕೆ ನಡೆಸಿದಾಕ್ಷಣ ಕಾನೂನಿಗೆ ಅತೀತರೇ? ಈ ವಿಚಾರದಲ್ಲಿ ಸರ್ಕಾರ ಏಕೆ ಮೌನ ವಹಿಸಿದೆ? ಅಧ್ಯಾತ್ಮದ ಹೆಸರಿನಲ್ಲಿ ಏನು ಮಾಡಿದ್ರೂ ಸರ್ಕಾರ ಸುಮ್ಮನೆ ಇರುತ್ತದೆಯೇ? ಹಣ ಸಂಗ್ರಹಿಸುತ್ತಿರುವ ವಿಷಯ ತಿಳಿದ ಕೂಡಲೇ ಸರ್ಕಾರ ತನಿಖೆ ನಡೆಸಬೇಕಿತ್ತು ಎಂದು ರಾಜ್ಯ ಸರ್ಕಾರಕ್ಕೂ ಚಾಟಿ ಬೀಸಿದೆ.
ಜನರಿಂದ ಯಾವ ರೀತಿ ಹಣ ಸಂಗ್ರಹಿಸಲಾಗುತ್ತಿದೆ? ಈವರೆಗೂ ಒಟ್ಟು ಎಷ್ಟು ಹಣ ಸಂಗ್ರಹಿಸಲಾಗಿದೆ? ವಿವರಣೆ ನೀಡುವಂತೆ ಈಶ ಫೌಂಡೇಶನ್ ಪರ ವಕೀಲರಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ