SSLC ಯಲ್ಲಿ ಅನುತ್ತೀರ್ಣ: 3 ವಿದ್ಯಾರ್ಥಿನಿಯರು ಆತ್ಮಹತ್ಯೆ

Kannadaprabha News   | Asianet News
Published : Aug 11, 2020, 11:59 AM IST
SSLC ಯಲ್ಲಿ ಅನುತ್ತೀರ್ಣ: 3 ವಿದ್ಯಾರ್ಥಿನಿಯರು ಆತ್ಮಹತ್ಯೆ

ಸಾರಾಂಶ

SSLC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಂಗಳೂರಿನ ಕಾವೇರಿ ನಗರದ ಸಂಧ್ಯಾ(16), ಹಾವೇರಿ ನಗರದ ದ್ಯಾಮವ್ವದೇವಿ ಗುಡಿ ಓಣಿಯ ವೈಷ್ಣವಿ ರಿತ್ತಿ (16), ಬ್ಯಾಡಗಿ ತಾಲೂಕಿನ ಕಾಶಂಬಿ ಗ್ರಾಮದ ಭಾರತಿ ಗದಿಗೆಪ್ಪ ಕೋಟಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಆ.11): ಸೋಮವಾರ ಪ್ರಕಟಗೊಂಡಿರುವ ಎಸ್ಸೆಲ್ಸ್‌ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ, ನಿರೀಕ್ಷಿತ ಫಲಿತಾಂಶ ಬಾರದ ಕಾರಣಗಳಿಗೆ ರಾಜ್ಯದಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರಿನ ಕಾವೇರಿ ನಗರದ ಸಂಧ್ಯಾ(16), ಹಾವೇರಿ ನಗರದ ದ್ಯಾಮವ್ವದೇವಿ ಗುಡಿ ಓಣಿಯ ವೈಷ್ಣವಿ ರಿತ್ತಿ (16), ಬ್ಯಾಡಗಿ ತಾಲೂಕಿನ ಕಾಶಂಬಿ ಗ್ರಾಮದ ಭಾರತಿ ಗದಿಗೆಪ್ಪ ಕೋಟಿ (16) ಆತ್ಮಹತ್ಯೆಗೆ ಶರಣಾದವರು.

ಮಹದೇವಪುರ ಸಮೀಪ ಕಾವೇರಿ ನಗರದ ನಿವಾಸಿ ಶಂಕರ್‌ ದಂಪತಿ ಪುತ್ರಿಯಾದ ಸಂಧ್ಯಾ ಸ್ಥಳೀಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಳು. ಎರಡು ವಿಷಯಗಳಲ್ಲಿ ಅನುತ್ತೀರ್ಣವಾಗಿರುವುದು ತಿಳಿದು ಬೇಸರಗೊಂಡ ಆಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

SSLC ಪರೀಕ್ಷೆಯ ಸಾಧಕರಿವರು; ಆಟೋ ಚಾಲಕನ ಮಗಳಿಗೆ 612 ಅಂಕ

ಹಾವೇರಿ ನಗರದ ದ್ಯಾಮವ್ವದೇವಿ ಗುಡಿ ಓಣಿಯ ವೈಷ್ಣವಿ ರಿತ್ತಿಗೆ ಗಣಿತದಲ್ಲಿ 18 ಅಂಕ ಬಿದ್ದಿತ್ತು. ಇದರಿಂದ ಮನನೊಂದು ನೇಣು ಹಾಕಿಕೊಂಡಿದ್ದಾಳೆ. ತಕ್ಷಣ ವಿಷಯ ಗೊತ್ತಾಗಿ ಮನೆಯವರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಇದೇ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಶಂಬಿ ಗ್ರಾಮದ ಭಾರತಿ ಗದಿಗೆಪ್ಪ ಕೋಟಿ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇವಳಿಗೆ ಪ್ರತಿಶತ 64ರಷ್ಟುಅಂಕ ಬಂದಿದ್ದು, ಇನ್ನೂ ಹೆಚ್ಚು ಅಂಕ ಬರುವ ನಿರೀಕ್ಷೆಯಲ್ಲಿದ್ದಳು ಎನ್ನಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಸ್ತಿಗಾಗಿ ಹಡೆದ ತಾಯಿಯನ್ನೇ ರಕ್ತಸಿಕ್ತಗೊಳಿಸಿದ ಮಗ: ಮಗನ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆ!
ಚೈನೀಸ್ ಎಂದು ನಿಂದಿಸಿ ಚಾಕು ಇರಿತ: ನಾನು ಭಾರತೀಯ ಎಂದು ಹೇಳಿ ಕೊನೆಯುಸಿರೆಳೆದ ತ್ರಿಪುರಾ ವಿದ್ಯಾರ್ಥಿ