ಕೊಪ್ಪಳ: ಶಾಲಾ ಆವರಣದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

Published : Aug 26, 2021, 08:19 AM ISTUpdated : Aug 26, 2021, 08:27 AM IST
ಕೊಪ್ಪಳ: ಶಾಲಾ ಆವರಣದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

ಸಾರಾಂಶ

*  ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಹಗೇದಾಳ ಬಳಿ ನಡೆದ ಘಟನೆ *  ಬೆಂಗಳೂರಿಗೆ ದುಡಿಯಲು ಹೋಗುವುದಾಗಿ ಹಠ ಹಿಡಿದಿದ್ದ ಬಾಲಕ *  ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ 

ಕೊಪ್ಪಳ(ಆ.26): ದುಡಿಯಲು ಬೆಂಗಳೂರಿಗೆ ತೆರಳುವುದಾಗಿ ಹಠ ಹಿಡಿದ ವಿದ್ಯಾರ್ಥಿಯೊಬ್ಬ ಕುಟುಂಬದ ಸದಸ್ಯರೊಡನೆ ಜಗಳವಾಡಿ ಶಾಲಾ ಆವರಣದಲ್ಲಿ ನೇಣಿಗೆ ಶರಣಾದ ಘಟನೆ ಕಾರಟಗಿ ತಾಲೂಕಿನ ಹಗೇದಾಳ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. 

ಚಳ್ಳೂರು-ಹಗೇದಾಳದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ರಮೇಶ ಭೋಗಾಪುರ(16) ತನ್ನ ಶಾಲೆಯ ಆವರಣದಲ್ಲೇ ಮಂಗಳವಾರ ತಡರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವ.

ಸಾಲಗಾರರ ಕಾಟಕ್ಕೆ ಹೆದರಿ ಸ್ನಾತಕೋತ್ತರ ಪದವೀಧರ ರೈತ ಆತ್ಮಹತ್ಯೆ

ಬೆಂಗಳೂರಿಗೆ ದುಡಿಯಲು ಹೋಗುವುದಾಗಿ ಹಠ ಹಿಡಿದಿದ್ದ ಬಾಲಕ, ಮನೆಯವರು ಒಪ್ಪದ ಕಾರಣ, ಮಂಗಳವಾರ ಸಂಜೆ ತನ್ನ ಮನೆಯಲ್ಲಿ ಹಿರಿಯರೊಂದಿಗೆ ಜಗಳವಾಡಿದ್ದ. ಪಾಲಕರು ವಿರೋಧಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!