ದಾಬಸ್‌ಪೇಟೆ: ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಚಾಕು ಇರಿತ

Published : May 25, 2024, 12:04 PM ISTUpdated : May 25, 2024, 12:05 PM IST
ದಾಬಸ್‌ಪೇಟೆ: ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಚಾಕು ಇರಿತ

ಸಾರಾಂಶ

ಬಸ್ ಚಾಲಕ ಶಿವಪ್ಪ, ವಾಹನ ಚಾಲಕ ಭಾಸ್ಕರ್ ರೆಡ್ಡಿಗೆ ಹಲ್ಲೆ ಮಾಡಿದ್ದರಿಂದ ಕೋಪಗೊಂಡ ಟಾಟಾ ಏಸ್ ಚಾಲಕ ವಾಹನದಲ್ಲಿದ್ದ ಚಾಕುವಿನಿಂದ ಬಸ್ ಚಾಲಕ ಶಿವಪ್ಪ ಮಡಿವಾಳರ ಹೊಟ್ಟೆಗೆ ತಿವಿದಿದ್ದಾನೆ. ಕೂಡಲೇ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ನಿರ್ವಾಹಕರು, ಆರೋಪಿ ಭಾಸ್ಕರ್ ರೆಡ್ಡಿಯನ್ನು ಹಿಡಿದು ದಾಬಸ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ದಾಬಸ್‌ಪೇಟೆ(ಮೇ.25):  ವಾಹನ ಓವರ್ ಟೆಕ್ ಮಾಡುವ ವಿಚಾರದಲ್ಲಿ ಟಾಟಾ ಏಸ್ ವಾಹನ ಚಾಲಕ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಡುವೆ ಜಗಳವಾಗಿ ಬಸ್ ಚಾಲಕನಿಗೆ ವಾಹನ ಚಾಲಕ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಶಿವಪ್ಪ ಮಡಿವಾಳ(40) ಹಲ್ಲೆಗೊಳಗಾದ ಚಾಲಕ. ಭಾಸ್ಕರ್‌ರೆಡ್ಡಿ (32) ಹಲ್ಲೆ ಮಾಡಿದ ವಾಹನ ಚಾಲಕ. ಮೇ 24ರಂದು ಬೆಳಗಿನ ಜಾವ 4.30 ಗಂಟೆಗೆ ಕೊಪ್ಪಳದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ಹಾಲು ಸಾಗಿಸುವ ಟಾಟಾ ಏಸ್ ಚಾಲಕನ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ದಾಬಸ್‌ಪೇಟೆ ಸಮೀಪದ ಮೇಲೆ ಜಗಳವಾಗಿದೆ. ನಂತರ ಟಾಟಾ ಏಸ್ ಚಾಲಕ ದಾಬಸ್‌ಪೇಟೆ ಬಳಿಯ ಪ್ಲೈ ಓವರ್ ರಸ್ತೆ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಹಾಕಿದ್ದು, ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ.

ಹುಬ್ಬಳ್ಳಿ: ನೇಹಾ, ಅಂಜಲಿ ಹಂತಕರ ಪರ ವಕಾಲತ್ತು ವಹಿಸಲು ವಕೀಲರೇ ಸಿಗುತ್ತಿಲ್ಲ..!

ಬಸ್ ಚಾಲಕ ಶಿವಪ್ಪ, ವಾಹನ ಚಾಲಕ ಭಾಸ್ಕರ್ ರೆಡ್ಡಿಗೆ ಹಲ್ಲೆ ಮಾಡಿದ್ದರಿಂದ ಕೋಪಗೊಂಡ ಟಾಟಾ ಏಸ್ ಚಾಲಕ ವಾಹನದಲ್ಲಿದ್ದ ಚಾಕುವಿನಿಂದ ಬಸ್ ಚಾಲಕ ಶಿವಪ್ಪ ಮಡಿವಾಳರ ಹೊಟ್ಟೆಗೆ ತಿವಿದಿದ್ದಾನೆ. ಕೂಡಲೇ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ನಿರ್ವಾಹಕರು, ಆರೋಪಿ ಭಾಸ್ಕರ್ ರೆಡ್ಡಿಯನ್ನು ಹಿಡಿದು ದಾಬಸ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಸ್ ಚಾಲಕನಿಗೆ ದಾಬಸ್‌ಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಭಾಸ್ಕರರೆಡ್ಡಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ