ರಾಮನಗರ: ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

Published : Jul 30, 2023, 12:00 PM IST
ರಾಮನಗರ: ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

ಸಾರಾಂಶ

ಬಾಲಕಿಯ ಹೇಳಿಕೆಯನ್ನು ಪಡೆದಿರುವ ಠಾಣಾಧಿಕಾರಿಗಳು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿ ಮಲತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ರಾಮನಗರ(ಜು.30): ಮಲತಂದೆಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ ಬಾಲಕಿ ತಾಲೂಕಿನ ಸರ್ಕಾರಿ ಶಾಲೆಯಿಂದ ನಾಪತ್ತೆಯಾಗಿ ಗುರುವಾರ ಬೆಂಗಳೂರಿನ ಕೋಣನಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರತ್ಯಕ್ಷವಾಗಿದ್ದಾಳೆ. ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಗುರುವಾರ ನಾಪತ್ತೆಯಾಗಿದ್ದಳು. ಶಾಲೆ ಬಿಟ್ಟ ನಂತರ ಕತ್ತಲಾದರೂ ಬಾಲಕಿ ಮನೆಗೆ ಬರಲಿಲ್ಲವೆಂದು ಬಾಲಕಿಯ ಮಲತಂದೆ ರಾಮನಗರದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಡಿವೈಎಸ್‌ಪಿ ದಿನಕರ್‌ ಶೆಟ್ಟಿ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ಶುಕ್ರವಾರ ಬೆಳಿಗ್ಗೆ ಸರ್ಕಾರಿ ಶಾಲೆಗೆ ತೆರಳಿ ಪರಿಶೀಲನೆ ನಡೆಸಿತ್ತು. ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳಿಂದ ಮಾಹಿತಿ ಕಲೆ ಹಾಕಿದರು. ಆದರೆ, ಶುಕ್ರವಾರ ಸಂಜೆ ವೇಳೆಗೆ ಬೆಂಗಳೂರಿನ ಕೋಣನಕುಂಟೆ ಠಾಣೆಯಲ್ಲಿ ಪ್ರತ್ಯಕ್ಷಳಾಗಿದ್ದು, ಪೊಲೀಸ್‌ ಅಧಿಕಾರಿಯೊಬ್ಬರು ಕರೆ ಮಾಡಿ ಬಾಲಕಿ ಠಾಣೆಗೆ ಹಾಜರಾಗಿರುವ ವಿಷಯವನ್ನು ದೃಢೀಕರಿಸಿದ್ದಾರೆ.

Mangaluru crimes: ಪ್ರೀತಿಸುವುದಾಗಿ ನಂಬಿಸಿ ಕೇರಳ ಮೂಲದ ಯುವಕರಿಂದ ಅಪ್ರಾಪ್ತೆಯ ಅತ್ಯಾಚಾರ

ತಮಿಳುನಾಡು ಮೂಲದ ಮಲತಂದೆ ಕೂಲಿ ಕೆಲಸ ಮಾಡುತ್ತಿದ್ದು, ಕುಟಂಬದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ತನ್ನ ಮಲತಂದೆಯ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದಿಂದ ನೊಂದ ಬಾಲಕಿ ಮನೆ ತೊರೆಯುವ ನಿರ್ಧಾರ ಮಾಡಿದ್ದಾಗಿ ಬಾಲಕಿ ಕೋಣನಕುಂಟೆ ಠಾಣೆಯಲ್ಲಿ ಹೇಳಿಕೊಂಡಿದ್ದಾಳೆ.

ಬಾಲಕಿಯ ಹೇಳಿಕೆಯನ್ನು ಪಡೆದಿರುವ ಠಾಣಾಧಿಕಾರಿಗಳು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿ ಮಲತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ಥ ಬಾಲಕಿಯನ್ನು ಕೋಣನಕುಂಟೆಯಲ್ಲಿರುವ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!