
ದಾವಣಗೆರೆ (ಜೂ. 06) ದಾವಣಗೆರೆ ಆಜಾದ್ ನಗರದಲ್ಲೊಂದು ಘೋರ ಘಟನೆ ನಡೆದುಹೋಗಿದೆ. ಬಾಲಕಿಯನ್ನು ಬೀದಿನಾಯಿಗಳು ಕಚ್ಚಿ ಎಳೆದೊಯ್ದಿವೆ.
ಮನೆಯಂಗಳದಲ್ಲಿದ್ದ ನಾಲ್ಕು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಗಾಯಗೊಂಡ ಬಾಲಕಿಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಏನ್ ಕಡಿಮೆ ಇಲ್ಲ ಬೀದಿ ನಾಯಿ ಕಾಟ
ಆಜಾದ್ನಗರ ನಿವಾಸಿ ತಲಾಂ ಶೇಖ್– ತಬುಸುಂ ಬಾನು ದಂಪತಿಯ ನಾಲ್ಕು ವರ್ಷದ ಮಗು ಕನಿಷ್ ಫಾತಿಮಾ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ ನಮಾಜ್ ವೇಳೆ ಅಂಗಳದಲ್ಲಿದ್ದ ಮಗುವಿನ ಮೇಲೆ ನಾಯಿಗಳು ದಾಳಿ ಮಾಡಿವೆ.
ಕೂಡಲೇ ಮನೆಯವರು ಬಂದು ಬಿಡಿಸಿದರೂ ತಲೆ, ಕೈ. ಕಾಲು ಸಹಿತ ದೇಹದ ವಿವಿಧೆಡೆ ಗಾಯ ಗಳಾಗಿದ್ದವು. ದಾವಣಗೆರೆ ಪಾಲಿಕೆ ಸಿಬ್ಬಂದಿ ವಿರುದ್ದ ಬಡಾವಣೆ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ