ಆಟವಾಡ್ತಿದ್ದವನ ಮೇಲೆ ಬೀದಿ ನಾಯಿಗಳ ದಾಳಿ.. ಬಾಲಕ ದುರ್ಮರಣ

Published : Nov 01, 2021, 04:30 AM IST
ಆಟವಾಡ್ತಿದ್ದವನ ಮೇಲೆ ಬೀದಿ ನಾಯಿಗಳ ದಾಳಿ.. ಬಾಲಕ ದುರ್ಮರಣ

ಸಾರಾಂಶ

* ಆಡುತ್ತಿದ್ದ ಬಾಲಕನ ಮೇಲೆ ಬೀದಿ  ನಾಯಿಗಳ ದಾಳಿ: ಬಾಲಕ ಸಾವು * ಬೆಂಗಳೂರಿನಲ್ಲಿ ಎರಡು ವರ್ಷದ ಹಿಂದೆ ಇಂಥದ್ದೆ ಪ್ರಕರಣ * ಹೆಚ್ಚಿದ ಬೀದಿ ನಾಯಿಗಳ ಸಂಖ್ಯೆಗೆ ಜನ ಹೈರಾಣ

ಶಿಡ್ಲಘಟ್ಟ(ಚಿಕ್ಕಬಳ್ಳಾಪುರ) (ನ. 01)ರಾಜ್ಯದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಬೀದಿನಾಯಿಗಳ ಹಿಂಡೊಂದು ಏಕಾಏಕಿ ನಡೆಸಿದ ದಾಳಿಗೆ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಸಂತೋಷ ನಗರದಲ್ಲಿ ಭಾನುವಾರ ನಡೆದಿದೆ. 

ಕಲಂದರ್‌ ಖಾನ್‌(11) ಮೃತ ಬಾಲಕ. ಬೆಳಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ ಬಾಲಕನ ಮೇಲೆ ಸುಮಾರು 15-20 ಸಂಖ್ಯೆಯಲ್ಲಿದ್ದ ನಾಯಿಗಳ ಹಿಂಡು ದಾಳಿ ನಡೆಸಿ ಕಚ್ಚಿದೆ. ಈ ವೇಳೆ ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. 

ಹಾಸನದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಗರಿಕರಿಂದ ಹಲವು ಬಾರಿ ನಗರಸಭೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ನಗರಸಭಾ ಸಿಬ್ಬಂದಿ ಸಾರ್ವಜನಿಕರ ತೀವ್ರ ಆಕ್ರೋಶ ಎದುರಿಸಬೇಕಾಯಿತು.

ದಾವಣಗೆರೆ ಆಜಾದ್ ನಗರದಲ್ಲಿ ಕಳೆದ ಜೂನ್ ವೇಳೆ  ಬಾಲಕಿಯನ್ನು ಬೀದಿನಾಯಿಗಳು ಕಚ್ಚಿ ಎಳೆದೊಯ್ದಿದ್ದವು.  ಮನೆಯಂಗಳದಲ್ಲಿದ್ದ ನಾಲ್ಕು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಗಾಯಗೊಂಡ ಬಾಲಕಿಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು