ರಾಯಚೂರು: ಸಿಂಧನೂರಲ್ಲಿ ತಾಯಿ,ಮಗನ ಮೇಲೆ ಬೀದಿ ನಾಯಿ ದಾಳಿ, ಬೆಚ್ಚಿಬೀಳಿಸುತ್ತೆ ಸಿಸಿಟಿವಿ ದೃಶ್ಯ! 

Published : Jan 07, 2024, 10:56 AM IST
ರಾಯಚೂರು: ಸಿಂಧನೂರಲ್ಲಿ ತಾಯಿ,ಮಗನ ಮೇಲೆ ಬೀದಿ ನಾಯಿ ದಾಳಿ, ಬೆಚ್ಚಿಬೀಳಿಸುತ್ತೆ ಸಿಸಿಟಿವಿ ದೃಶ್ಯ! 

ಸಾರಾಂಶ

ಆಸ್ಪತ್ರೆಗೆ ತೆರಳಿದ್ದ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ. ಬೀದಿನಾಯಿ ದಾಳಿಗೊಳಗಾದ ಪ್ರೀತಂ ಹಾಗೂ ಗಂಗಮ್ಮ.

ರಾಯಚೂರು (ಜ.7): ಆಸ್ಪತ್ರೆಗೆ ತೆರಳಿದ್ದ ತಾಯಿ ಮಗನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.

ಬೀದಿನಾಯಿ ದಾಳಿಗೊಳಗಾದ ಪ್ರೀತಂ ಹಾಗೂ ಗಂಗಮ್ಮ. ಇದೇ ಜನೆವರಿ 4ರಂದು ಸಂಜೆ ಆದರ್ಶ ಕಾಲೋನಿಯಲ್ಲಿರುವ ಆಸ್ಪತ್ರೆಗೆ ಮಗನೊಂದಿಗೆ ತೆರಳಿದ್ದ ಗಂಗಮ್ಮ. ವೇಳೆ ಹೊರ ಬರುತ್ತಿದ್ದ ತಾಯಿ ಮಗ. ತಾಯಿ ಸ್ಕೂಟಿ ಬಳಿ ತೆರಳಿದ್ದಳು. ಹಿಂದೆ ಬರುತ್ತಿದ್ದ ಮಗ ಪ್ರೀತಂ ಮೇಲೆ ಏಕಾಏಕಿ ದಾಳಿ ನಡೆಸಿದೆ. ಕೆಳಗೆ ಬಿದ್ದು ಒದ್ದಾಡಿದರೂ ಕಾಲು ತೊಡೆ ಭಾಗಕ್ಕೆ ಬಲವಾಗಿ ಕಚ್ಚಿರುವ ಬೀದಿನಾಯಿ. ನಾಯಿ ದಾಳಿಯಿಂದ ಮಗನ ರಕ್ಷಿಸಲು ಬಂದ ತಾಯಿಗೂ ಕಚ್ಚಿದೆ. ಕೊನೆಗೆ ಹರಸಾಹಸ ಪಟ್ಟು ನಾಯಿ‌ ಓಡಿಸಿದ ಸ್ಥಳೀಯರು.

ಬೆಂಗಳೂರಿನಲ್ಲಿ 2.79 ಲಕ್ಷಕ್ಕೆ ಕುಸಿತಗೊಂಡ ಬೀದಿ ನಾಯಿಗಳ ಸಂಖ್ಯೆ: ಸಮೀಕ್ಷಾ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಗಾಯಾಳುಗಳು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೀದಿನಾಯಿ ಕಂಡರೇನೆ ಭಯಪಡುವಂತಾಗಿದೆ.

ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು, ಹಿರಿಯನಾಗರಿಕರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಈ ಹಿಂದೆಯೂ ಹಲವು ಬಾರಿ ಬೀದಿನಾಯಿಗಳು ದಾರಿಹೋಕರಿಗೆ ಕಚ್ಚಿದ ಘಟನೆಗಳುವ ನಡೆದಿವೆ. ಆದರೂ ನಗರಸಭೆ ಅಧಿಕಾರಿಗಳು ಬೀದಿನಾಯಿಗಳನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಅಧಿಕಾರಿಗಳ ಬೇಜಾವಬ್ದಾರಿತನಕ್ಕೆ ಇನ್ನೆಷ್ಟು ಜನ ಬೀದಿನಾಯಿಗಳ ದಾಳಿ ನರಳಬೇಕು. ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಾಣಂತಿ ಆರೋಗ್ಯ ತಪಾಸಣೆಗೆ ತೆರಳಿದ್ದ ಆರೋ​ಗ್ಯಾ​ಧಿ​ಕಾರಿ ಮೇಲೆ ನಾಯಿ ದಾಳಿ: ಮಾಲೀಕ ವಿರುದ್ಧ ಪ್ರಕ​ರ​ಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!