
ಕಲಬುರಗಿ (ಜು.29) : ಕಿರುಕುಳ ತಾಳದೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ದುಬೈ ಕಾಲೋನಿಯ ಸಂಜಯ ಗಾಂಧಿ ನಗರದ ನಂದೀಶ ಶಿವಾನಂದಯ್ಯ ಹಿರೇಮಠ (17) ಎಂಬ ವಿದ್ಯಾರ್ಥಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಂದೀಶ ಮನೆಯಲ್ಲಿ ಯಾರ ಗಮನಕ್ಕೆ ತರದೆ 7 ಗ್ರಾಂ.ಬಂಗಾರವನ್ನು ತೆಗೆದುಕೊಂಡು ಹೋಗಿ ಸಂತೋಷ ಕಾಮನಳ್ಳಿ ಎಂಬಾತನಿಗೆ ಕೊಟ್ಟಿದ್ದು, ಸಂತೋಷ ಕಾಮನಳ್ಳಿ ಈ ಆಭರಣ ಮಾರಿ ನಂದೀಶಗೆ .10 ಸಾವಿರ ನೀಡಿದ್ದಾನೆ. ಈ ಹಣದಲ್ಲಿ ನಂದೀಶ ಮೊಬೈಲ್ ಖರೀದಿಸಿದ್ದು, ನಂದೀಶ ಬಳಿ ಮೊಬೈಲ್ ನೋಡಿದ ಆತನ ಪಾಲಕರು ವಿಚಾರಿಸಿದಾಗ ಮನೆಯಲ್ಲಿದ್ದ ಬಂಗಾರ ತೆಗೆದುಕೊಂಡು ಹೋಗಿ ಸಂತೋಷ ಕಾಮನಳ್ಳಿಗೆ ಕೊಟ್ಟಿದ್ದಾಗಿ ಆತ ಅದನ್ನು ಮಾರಿ ತನಗೆ 10 ಸಾವಿರ ರು. ನೀಡಿದ್ದಾಗಿ ಆ ಹಣದಲ್ಲಿ ಮೊಬೈಲ್ ಖರೀದಿಸಿದ್ದಾಗಿ ತಿಳಿಸಿದ್ದಾನೆ.
ಫೋನ್ ಕಳ್ಳತನದ ದೂರು ಕೊಡಲು ಹೋಗುವಾಗ ಬೈಕ್ ಕದ್ದ ಖದೀಮರು!
ಈ ಬಗ್ಗೆ ನಂದೀಶ ತಂದೆ ಸಂತೋಷ ಕಾಮನಳ್ಳಿಯನ್ನು ವಿಚಾರಿಸಿ ಬಂಗಾರದ ಆಭರಣ ಮಾರಿದ ಮೇಲೆ ಇನ್ನುಳಿದ ಮೇಲಿನ ಹಣ ನೀಡುವಂತೆ ಕೇಳಿದ್ದಾರೆ. ಆಗ ಸಂತೋಷ ಮೇಲಿನ ಹಣ ಎಲ್ಲಿಂದ ಬರುತ್ತೆ, ಬರುವುದಿಲ್ಲ ಎಂದಿದ್ದಾನೆ. ಇದಾದ ನಂತರ ಸಂತೋಷ ನಂದೀಶಗೆ ನಿಮ್ಮ ತಂದೆ ಹಣ ಕೇಳುತ್ತಿದ್ದಾರೆ ಅವರಿಗೆ ನಾನು ಹಣ ವಾಪಸ್ ಕೊಡುತ್ತೇನೆ, ನಾನು ನಿನಗೆ ಕೊಟ್ಟ10 ಸಾವಿರ ರು. ವಾಪಸ್ ಕೊಡಬೇಕು ಇಲ್ಲದಿದ್ದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಕಿರುಕುಳ ತಾಳದೆ ನಂದೀಶ ಮನೆಯಲ್ಲಿನ ಬಾತ್ ರೂಮಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಂದೀಶ ಆತ್ಮಹತ್ಯೆಗೆ ಸಂತೋಷ ಕಾಮನಳ್ಳಿ ಮತ್ತು ಅವರ ತಂದೆ ಕಾಂತಪ್ಪ ಕಾಮನಳ್ಳಿ ಅವರೇ ಕಾರಣೀಕರ್ತರಾಗಿದ್ದು, ಅವರ ವಿರುದ್ಧ ಕಾನೂನಾರಿತ್ಯ ಕ್ರಮ ಜರುಗಿಸಬೇಕು ಎಂದು ನಂದೀಶ ತಂದೆ ಶಿವಾನಂದಯ್ಯ ಹಿರೇಮಠ ಅವರು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಶಿವಮೊಗ್ಗ: ಜೆಸಿಬಿ ಬಳಸಿ ATM ಕಳ್ಳತನಕ್ಕೆ ಯತ್ನಿಸಿದ ಭೂಪ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ