ಅಂಕೋಲಾ: ನೇಣು ಬಿಗಿ​ದು​ಕೊಂಡು ವಿದ್ಯಾರ್ಥಿನಿ ಆತ್ಮ​ಹ​ತ್ಯೆ

Kannadaprabha News   | Asianet News
Published : Dec 09, 2020, 10:52 AM IST
ಅಂಕೋಲಾ: ನೇಣು ಬಿಗಿ​ದು​ಕೊಂಡು ವಿದ್ಯಾರ್ಥಿನಿ ಆತ್ಮ​ಹ​ತ್ಯೆ

ಸಾರಾಂಶ

ನರ್ಸಿಂಗ್‌ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ನಾಗರತ್ನಾ ತುಳಸು ಗೌಡ| ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ನಡೆದ ಘಟನೆ| ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಪಿಐ ಕೃಷ್ಣಾನಂದ| 

ಅಂಕೋಲಾ(ಡಿ.09): ನೇಣು ಬಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರವಾಡದ ಒಕ್ಕಲಕೇರಿಯಲ್ಲಿ ಮಂಗಳವಾರ ನಡೆದಿದೆ. ನಾಗರತ್ನಾ ತುಳಸು ಗೌಡ (21) ಆತ್ಮಹತ್ಯೆ ಮಾಡಿಕೊಂಡವಳು.

ಮೂಲತ ಉಳವರೆಯವಳಾದ ನಾಗರತ್ನಾ ತನ್ನ ಮಾವ ಛತ್ರಪತಿ ಗೌಡ ಅವರ ಮನೆಯಲ್ಲಿ ಚಿಕ್ಕಂದಿನಿಂದಲೇ ವಾಸವಾಗಿದ್ದಳು. ಅಂಕೋಲಾದ ನರ್ಸಿಂಗ್‌ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಇವ​ಳು ಮಂಗಳವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಬೆಳಗಿನ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಮಗ​ಳಿಗೆ ಅನಾ​ರೋ​ಗ್ಯ: ​ಆತ್ಮ​ಹ​ತ್ಯೆಗೆ ಶರಣಾದ ತಾಯಿ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಿಪಿಐ ಕೃಷ್ಣಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಎಸೈ ಲಲಿತಾ ರಜಪೂತ್‌, ಹಾರವಾಡ ಬೀಟ್‌ ಸಿಬ್ಬಂದಿ ಮಂಜುನಾಥ ಲಕ್ಷ್ಮಾಪುರ, ತನಿಖಾ ಸಹಾಯಕ ಸಂತೋಷ ಆರ್‌.ಕೆ. ಪರಿಶೀಲನೆ ನಡೆಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು