ರಾಮನಗರ: ನೀರಿನ ತೊಟ್ಟಿ ಗೋಡೆ ಕುಸಿದು ವಿದ್ಯಾರ್ಥಿ ಸಾವು; ಇನ್ನೋರ್ವ ಗಂಭೀರ ಗಾಯ

Published : Sep 21, 2023, 12:22 PM ISTUpdated : Sep 21, 2023, 12:33 PM IST
ರಾಮನಗರ: ನೀರಿನ ತೊಟ್ಟಿ ಗೋಡೆ ಕುಸಿದು ವಿದ್ಯಾರ್ಥಿ ಸಾವು; ಇನ್ನೋರ್ವ ಗಂಭೀರ ಗಾಯ

ಸಾರಾಂಶ

ನೀರಿನ ತೊಟ್ಟಿ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿರುವ ದುರ್ಘಟನೆ ರಾಮನಗರದ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿ ಕೌಶಿಕ್ ಮೃತ ವಿದ್ಯಾರ್ಥಿ

ವರದಿ-ಜಗದೀಶ್ ಏಷ್ಯಾನೆಟ್ ಸುವರ್ಣನ್ಯೂಸ್, ರಾಮನಗರ

ರಾಮನಗರ (ಸೆ.21):
ನೀರಿನ ತೊಟ್ಟಿ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿರುವ ದುರ್ಘಟನೆ ರಾಮನಗರದ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ನಡೆದಿದೆ.

ವಿದ್ಯಾರ್ಥಿ ಕೌಶಿಕ್ ಮೃತ ವಿದ್ಯಾರ್ಥಿ. ಗೊಲ್ಲಹಳ್ಳಿ ಗ್ರಾಮದಲ್ಲಿರು ಮೊರಾರ್ಜಿ ವಸತಿ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್ . ಹಾಸ್ಟೆಲ್ ಹೊರ ಭಾಗದಲ್ಲಿ ನಿರ್ಮಾಣವಾಗಿರುವ ನೀರಿನ ಸಿಮೆಂಟ್ ತೊಟ್ಟಿ  ಈ ತೊಟ್ಟಿಗೆ ನಲ್ಲಿಗಳನ್ನ ಅಳವಡಿಸಲಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ ಮುಖ ತೊಳೆದುಕೊಳ್ಳಲು ಇದೆ ತೊಟ್ಟಿಯ ಬಳಿ ಹೋಗಿದ್ದಾರೆ. 

ಬೆಳಗ್ಗೆ  ಸುಮಾರು 40 ವಿದ್ಯಾರ್ಥಿಗಳು ಜೊತೆಯಲ್ಲಿ ಹೋಗಿ ಮುಖ ತೊಳೆದುಕೊಂಡು‌ ಬಂದಿದ್ರು. ನಂತರ ಸ್ನೇಹಿತರಿಬ್ಬರ ಜೊತೆ ಕೌಶಿಕ್ ಹಾಗೂ ತೊಟ್ಟಿಯ ಬಳಿ ಹೋದಾಗ ತೊಟ್ಟಿಯ ಎರಡು ಕಡೆಯ ಗೋಡೆ ಒಮ್ಮೆಲೆ ಕುಸಿದಿದೆ. ಗೋಡೆ ಕೌಶಿಕ್ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಮತ್ತೋರ್ವನ ಕಾಲಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

 

ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದ ವ್ಯಕ್ತಿ ಹಾರ್ಟ್‌ಅಟ್ಯಾಕ್‌ನಿಂದ ಸಾವು, ಹೃದಯ ವಿದ್ರಾವಕ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಮೃತ ವಿದ್ಯಾರ್ಥಿಯ ಶವವನ್ನ ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!